ನವದೆಹಲಿ: ಕಳೆದ ಶುಕ್ರವಾದ ಸುರಿದ ಭಾರೀ ಮಳೆಯಿಂದಾಗಿ ಉತ್ತರ ದೆಹಲಿಯ ಸಮಯಪುರ ಬದ್ಲಿ ಪ್ರದೇಶದಲ್ಲಿ ಜಲಾವೃತವಾದ ಅಂಡರ್ಪಾಸ್ನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಇಂದು ಮಧ್ಯಾಹ್ನದ ವೇಳೆಗೆ ಸಿರಸ್ಪುರ ಅಂಡರ್ಪಾಸ್ ಬಳಿ 12 ವರ್ಷದ ಬಾಲಕ ನೀರಿನಲ್ಲಿ ಮುಳುಗಿದ ಬಗ್ಗೆ ಕರೆ ಬಂದಿತ್ತು. ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದರು. ಅಗ್ನಿಶಾಮಕ ದಳವು ತನ್ನ ರಕ್ಷಣಾ ವಾಹನಗಳನ್ನು ರವಾನಿಸಿತು ಎಂದು ಉಪ ಪೊಲೀಸ್ ಆಯುಕ್ತ ಆರ್ಕೆ ಸಿಂಗ್ ಮಾಹಿತಿ ನೀಡಿದ್ದಾರೆ.
ಮೆಟ್ರೋ ಬಳಿಯ ಅಂಡರ್ಪಾಸ್ನಲ್ಲಿ ಸುಮಾರು 3 ಅಡಿಗಿಂತಲೂ ಹೆಚ್ಚು ನೀರಿನಿಂದ ತುಂಬಿರುವುದು ಕಂಡು ಬಂದಿತ್ತು. ಅಗ್ನಿಶಾಮಕ ದಳವು ಶೋಧ ಕಾರ್ಯಾಚರಣೆಯನ್ನು ನಡೆಸಿ ಇಬ್ಬರು ಬಾಲಕರ ಶವವನ್ನು ಹೊರತೆಗೆದಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.
ಇಬ್ಬರು ಬಾಲಕರನ್ನು ತಕ್ಷಣವೇ ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಡಿಎಫ್ಎಸ್ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.
ಪ್ರಾಥಮಿಕ ವಿಚಾರಣೆಯ ಪ್ರಕಾರ ಬಾಲಕರು ಈಜಾಡುವ ಸಲುವಾಗಿ ನೀರಿಗೆ ಇಳಿದಿದ್ದಾಗ ಈ ಘಟನೆ ಸಂಭವಿಸಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 174ರ ಅಡಿಯಲ್ಲಿ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದಾರೆ. ಈ ಇಬ್ಬರು ಮಕ್ಕಳನ್ನು ಹೊರತುಪಡಿಸಿ, ಆಗ್ನೇಯ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಸ್ಕೂಟರ್ನಲ್ಲಿ ಹೋಗುತ್ತಿದ್ದ 60 ವರ್ಷದ ವ್ಯಕ್ತಿಯೊಬ್ಬರು ನೀರಿನಿಂದ ತುಂಬಿರುವ ಅಂಡರ್ಪಾಸ್ನಲ್ಲಿ ಬಿದ್ದು ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…