ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ 88 ವರ್ಷದ ದಾಖಲೆ ಮಳೆಗೆ ಜನ ತತ್ತರಿಸಿದ್ದು, ಭಾರೀ ಮಳೆಗೆ ಆರು ಮಂದಿ ಮೃತಪಟ್ಟಿದ್ದಾರೆ.
ಜುಲೈ.1ರವರೆಗೆ ದೆಹಲಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜನತೆಯಲ್ಲಿ ಭಾರೀ ಆತಂಕ ಮನೆ ಮಾಡಿದೆ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆಯಿಂದ ಬಸವಳಿದಿರುವ ದೆಹಲಿ ಜನತೆ, ಭಾರೀ ಮಳೆಗೆ ತತ್ತರಿಸಿ ಹೋಗಿದ್ದಾರೆ.
ಭಾರೀ ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಕತ್ತಲಲ್ಲೇ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯೂ ಉಸ್ಮಾನ್ಪುರ ಪ್ರದೇಶದಲ್ಲಿ 8 ಮತ್ತು 10 ವರ್ಷ ವಯಸ್ಸಿನ ಇಬ್ಬರು ಬಾಲಕರು ಮಳೆ ನೀರು ತುಂಬಿದ ಹಳ್ಳದಲ್ಲಿ ಆಟವಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮತ್ತೊಂದು ಘಟನೆಯಲ್ಲಿ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ಪ್ರವಾಹಕ್ಕೆ ಒಳಗಾದ ಅಂಡರ್ಪಾಸ್ನಲ್ಲಿ ವ್ಯಕ್ತಿಯೊಬ್ಬ ಮುಳುಗಿ ಸಾವನ್ನಪ್ಪಿದ್ದಾನೆ. ವಸಂತ ವುಹಾರ್ನಲ್ಲಿ ಕುಸಿದ ನಿರ್ಮಾಣ ಹಂತದ ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಪೈಕಿ ಒಬ್ಬನ ಮೃತದೇಹ ಪತ್ತೆಯಾಗಿದೆ.
ಭಾರೀ ಮಳೆಯಿಂದಾಗಿ ಹಲವೆಡೆ ಬೃಹತ್ ಮರಗಳು ಧರೆಗುರುಳಿದ್ದು, ಜನವಸತಿ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಆಸ್ತಿ ಮತ್ತು ಕಾರುಗಳಿಗೆ ಹಾನಿಯಾಗಿದೆ. ಅನೇಕ ವಸತಿ ಪ್ರದೇಶದಲ್ಲಿ ಸ್ಥಳೀಯರು ತಮ್ಮ ಮನೆಗಳನ್ನು ಬಿಡಲು ಸೊಂಟದ ಆಳದ ನೀರಿನ ಮೂಲಕ ಪರದಾಡುವಂತಾಗಿದೆ.
88 ವರ್ಷಗಳಲ್ಲಿ ಜೂನ್ನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನದಲ್ಲಿ ಅತ್ಯಧಿಕ ಮಳೆ ಸುರಿದಿದ್ದು, ಮಳೆಯಿಂದ ಇಡೀ ನಗರ ಸ್ತಬ್ಧಗೊಂಡಿದೆ. ಇನ್ನೂ ದೆಹಲಿಯ ಕೆಲವು ಭಾಗಗಳಲ್ಲಿ ಜುಲೈ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…