ದೇಶ- ವಿದೇಶ

ದಾಖಲೆ ಮಳೆಗೆ ತತ್ತರಿಸಿದ ದೆಹಲಿ: ವಿದ್ಯುತ್‌ ಇಲ್ಲದೇ ಜನರ ಪರದಾಟ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ 88 ವರ್ಷದ ದಾಖಲೆ ಮಳೆಗೆ ಜನ ತತ್ತರಿಸಿದ್ದು, ಭಾರೀ ಮಳೆಗೆ ಆರು ಮಂದಿ ಮೃತಪಟ್ಟಿದ್ದಾರೆ.

ಜುಲೈ.1ರವರೆಗೆ ದೆಹಲಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜನತೆಯಲ್ಲಿ ಭಾರೀ ಆತಂಕ ಮನೆ ಮಾಡಿದೆ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆಯಿಂದ ಬಸವಳಿದಿರುವ ದೆಹಲಿ ಜನತೆ, ಭಾರೀ ಮಳೆಗೆ ತತ್ತರಿಸಿ ಹೋಗಿದ್ದಾರೆ.

ಭಾರೀ ಮಳೆಯಿಂದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಕತ್ತಲಲ್ಲೇ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ 8 ಮತ್ತು 10 ವರ್ಷ ವಯಸ್ಸಿನ ಇಬ್ಬರು ಬಾಲಕರು ಮಳೆ ನೀರು ತುಂಬಿದ ಹಳ್ಳದಲ್ಲಿ ಆಟವಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮತ್ತೊಂದು ಘಟನೆಯಲ್ಲಿ ಶಾಲಿಮಾರ್‌ ಬಾಗ್‌ ಪ್ರದೇಶದಲ್ಲಿ ಪ್ರವಾಹಕ್ಕೆ ಒಳಗಾದ ಅಂಡರ್‌ಪಾಸ್‌ನಲ್ಲಿ ವ್ಯಕ್ತಿಯೊಬ್ಬ ಮುಳುಗಿ ಸಾವನ್ನಪ್ಪಿದ್ದಾನೆ. ವಸಂತ ವುಹಾರ್‌ನಲ್ಲಿ ಕುಸಿದ ನಿರ್ಮಾಣ ಹಂತದ ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಪೈಕಿ ಒಬ್ಬನ ಮೃತದೇಹ ಪತ್ತೆಯಾಗಿದೆ.

ಭಾರೀ ಮಳೆಯಿಂದಾಗಿ ಹಲವೆಡೆ ಬೃಹತ್‌ ಮರಗಳು ಧರೆಗುರುಳಿದ್ದು, ಜನವಸತಿ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಆಸ್ತಿ ಮತ್ತು ಕಾರುಗಳಿಗೆ ಹಾನಿಯಾಗಿದೆ. ಅನೇಕ ವಸತಿ ಪ್ರದೇಶದಲ್ಲಿ ಸ್ಥಳೀಯರು ತಮ್ಮ ಮನೆಗಳನ್ನು ಬಿಡಲು ಸೊಂಟದ ಆಳದ ನೀರಿನ ಮೂಲಕ ಪರದಾಡುವಂತಾಗಿದೆ.

88 ವರ್ಷಗಳಲ್ಲಿ ಜೂನ್‌ನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನದಲ್ಲಿ ಅತ್ಯಧಿಕ ಮಳೆ ಸುರಿದಿದ್ದು, ಮಳೆಯಿಂದ ಇಡೀ ನಗರ ಸ್ತಬ್ಧಗೊಂಡಿದೆ. ಇನ್ನೂ ದೆಹಲಿಯ ಕೆಲವು ಭಾಗಗಳಲ್ಲಿ ಜುಲೈ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೋನಮ್‌ ವಾಂಗ್ಚುಕ್‌ಗೆ ಅಗತ್ಯ ವೈದ್ಯಕೀಯ ನೆರವು ನೀಡುತ್ತೇವೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಮಾಹಿತಿ

ನವದೆಹಲಿ: ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ…

12 hours ago

ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದು

ನವದೆಹಲಿ: ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ…

12 hours ago

ಮಾಜಿ ಪ್ರಧಾನಿ ಎಚ್‌ಡಿಡಿ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರ: ವೈದ್ಯರ ಮಾಹಿತಿ

ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ…

12 hours ago

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ ಫುಟ್‌ಪಾತ್‌ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…

20 hours ago

ಓದುಗರ ಪತ್ರ: ಕೆಪಿಎಸ್‌ಸಿ ಹಗರಣ; ಯುವಜನರ ಭವಿಷ್ಯಕ್ಕೆ ಕೊಳ್ಳಿ

ಕೆಪಿಎಸ್‌ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…

20 hours ago

ಓದುಗರ ಪತ್ರ: ಯಕ್ಷಪ್ರಶ್ನೆ

ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…

20 hours ago