ಕಠ್ಮಂಡು: ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳದ ಜನತೆ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ 112 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಲಾಗಿದೆ.
ನೇಪಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಈಗಾಗಲೇ 112 ಜನರು ಮೃತಪಟ್ಟಿದ್ದಾರೆ ಎಂಬುದನ್ನು ಅಲ್ಲಿಯ ರಕ್ಷಣಾ ಕಾರ್ಯಚರಣೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ದೇಶದ ಕೆಲವು ಭಾಗಗಳು ಜಲಾವೃತಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.
ನಿರಂತರ ಮಳೆಯಿಂದ ಇಲ್ಲಿಯವರೆಗೂ 112 ಜನ ಮರಣ ಹೊಂದಿದ್ದು, ಇವರಲ್ಲಿ 34 ಜನ ರಾಜಧಾನಿ ಕಠ್ಮಂಡು ಕಣಿವೆಯಲ್ಲಿಯೇ ಸಾವಿಗೀಡಾಗಿದ್ದಾರೆ. 36 ಜನ ಅಪಘಾತದಿಂದ ಗಾಯಗೊಂಡಿದ್ದಾರೆ ಎಂದು ನೇಪಾಳ ಪೊಲೀಸ್ ಉಪ ವಕ್ತಾರ ಬಿಷ್ಟೋ ಅಧಿಕಾರಿ ಮಾಹಿತಿ ನೀಡಿದ್ದಾರೆ.
ನೇಪಾಳದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ. ಕಠ್ಮಂಡುವಿನಲ್ಲಿ ಮಳೆಯಿಂದ 226 ಮನೆಗಳು ಮುಳುಗಡೆಯಾಗಿವೆ. ಅಲ್ಲದೇ ಪ್ರವಾಹದಲ್ಲಿ 44 ಮಂದಿ ನಾಪತ್ತೆಯಾಗಿದ್ದು, ಸಾವಿರಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸುಮಾರು ಸುಮಾರು 3,000 ಮಂದಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…