ದೇಶ- ವಿದೇಶ

ನೇಪಾಳದಲ್ಲಿ ಧಾರಾಕಾರ ಮಳೆ: ಸಾವಿನ ಸಂಖ್ಯೆ 112ಕ್ಕೆ ಏರಿಕೆ

ಕಠ್ಮಂಡು: ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳದ ಜನತೆ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ 112 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಲಾಗಿದೆ.

ನೇಪಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಈಗಾಗಲೇ 112 ಜನರು ಮೃತಪಟ್ಟಿದ್ದಾರೆ ಎಂಬುದನ್ನು ಅಲ್ಲಿಯ ರಕ್ಷಣಾ ಕಾರ್ಯಚರಣೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ದೇಶದ ಕೆಲವು ಭಾಗಗಳು ಜಲಾವೃತಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ನಿರಂತರ ಮಳೆಯಿಂದ ಇಲ್ಲಿಯವರೆಗೂ 112 ಜನ ಮರಣ ಹೊಂದಿದ್ದು, ಇವರಲ್ಲಿ 34 ಜನ ರಾಜಧಾನಿ ಕಠ್ಮಂಡು ಕಣಿವೆಯಲ್ಲಿಯೇ ಸಾವಿಗೀಡಾಗಿದ್ದಾರೆ. 36 ಜನ ಅಪಘಾತದಿಂದ ಗಾಯಗೊಂಡಿದ್ದಾರೆ ಎಂದು ನೇಪಾಳ ಪೊಲೀಸ್ ಉಪ ವಕ್ತಾರ ಬಿಷ್ಟೋ ಅಧಿಕಾರಿ ಮಾಹಿತಿ ನೀಡಿದ್ದಾರೆ.‌

ನೇಪಾಳದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್‌ ಮಾಡಲಾಗಿದೆ. ಕಠ್ಮಂಡುವಿನಲ್ಲಿ ಮಳೆಯಿಂದ 226 ಮನೆಗಳು ಮುಳುಗಡೆಯಾಗಿವೆ. ಅಲ್ಲದೇ ಪ್ರವಾಹದಲ್ಲಿ 44 ಮಂದಿ ನಾಪತ್ತೆಯಾಗಿದ್ದು, ಸಾವಿರಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸುಮಾರು ಸುಮಾರು 3,000 ಮಂದಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

9 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

19 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

41 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

1 hour ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

1 hour ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago