ಕಠ್ಮಂಡು: ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳದ ಜನತೆ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ 112 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಲಾಗಿದೆ.
ನೇಪಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಈಗಾಗಲೇ 112 ಜನರು ಮೃತಪಟ್ಟಿದ್ದಾರೆ ಎಂಬುದನ್ನು ಅಲ್ಲಿಯ ರಕ್ಷಣಾ ಕಾರ್ಯಚರಣೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ದೇಶದ ಕೆಲವು ಭಾಗಗಳು ಜಲಾವೃತಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.
ನಿರಂತರ ಮಳೆಯಿಂದ ಇಲ್ಲಿಯವರೆಗೂ 112 ಜನ ಮರಣ ಹೊಂದಿದ್ದು, ಇವರಲ್ಲಿ 34 ಜನ ರಾಜಧಾನಿ ಕಠ್ಮಂಡು ಕಣಿವೆಯಲ್ಲಿಯೇ ಸಾವಿಗೀಡಾಗಿದ್ದಾರೆ. 36 ಜನ ಅಪಘಾತದಿಂದ ಗಾಯಗೊಂಡಿದ್ದಾರೆ ಎಂದು ನೇಪಾಳ ಪೊಲೀಸ್ ಉಪ ವಕ್ತಾರ ಬಿಷ್ಟೋ ಅಧಿಕಾರಿ ಮಾಹಿತಿ ನೀಡಿದ್ದಾರೆ.
ನೇಪಾಳದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ. ಕಠ್ಮಂಡುವಿನಲ್ಲಿ ಮಳೆಯಿಂದ 226 ಮನೆಗಳು ಮುಳುಗಡೆಯಾಗಿವೆ. ಅಲ್ಲದೇ ಪ್ರವಾಹದಲ್ಲಿ 44 ಮಂದಿ ನಾಪತ್ತೆಯಾಗಿದ್ದು, ಸಾವಿರಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸುಮಾರು ಸುಮಾರು 3,000 ಮಂದಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…