ಕಠ್ಮಂಡು: ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳದ ಜನತೆ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ 112 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಲಾಗಿದೆ.
ನೇಪಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಈಗಾಗಲೇ 112 ಜನರು ಮೃತಪಟ್ಟಿದ್ದಾರೆ ಎಂಬುದನ್ನು ಅಲ್ಲಿಯ ರಕ್ಷಣಾ ಕಾರ್ಯಚರಣೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ದೇಶದ ಕೆಲವು ಭಾಗಗಳು ಜಲಾವೃತಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.
ನಿರಂತರ ಮಳೆಯಿಂದ ಇಲ್ಲಿಯವರೆಗೂ 112 ಜನ ಮರಣ ಹೊಂದಿದ್ದು, ಇವರಲ್ಲಿ 34 ಜನ ರಾಜಧಾನಿ ಕಠ್ಮಂಡು ಕಣಿವೆಯಲ್ಲಿಯೇ ಸಾವಿಗೀಡಾಗಿದ್ದಾರೆ. 36 ಜನ ಅಪಘಾತದಿಂದ ಗಾಯಗೊಂಡಿದ್ದಾರೆ ಎಂದು ನೇಪಾಳ ಪೊಲೀಸ್ ಉಪ ವಕ್ತಾರ ಬಿಷ್ಟೋ ಅಧಿಕಾರಿ ಮಾಹಿತಿ ನೀಡಿದ್ದಾರೆ.
ನೇಪಾಳದಾದ್ಯಂತ 44 ಸ್ಥಳಗಳಲ್ಲಿ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ. ಕಠ್ಮಂಡುವಿನಲ್ಲಿ ಮಳೆಯಿಂದ 226 ಮನೆಗಳು ಮುಳುಗಡೆಯಾಗಿವೆ. ಅಲ್ಲದೇ ಪ್ರವಾಹದಲ್ಲಿ 44 ಮಂದಿ ನಾಪತ್ತೆಯಾಗಿದ್ದು, ಸಾವಿರಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸುಮಾರು ಸುಮಾರು 3,000 ಮಂದಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…