ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ.
ಜೂನ್ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು ಮಾತ್ರವೇ ಮಳೆ ಸುರಿದಿದೆ. ಅಂದರೆ ಒಟ್ಟಾರೆ ಮಳೆ ಕೊರತೆ ಪ್ರಮಾಣ ಶೇ.11ರಷ್ಟಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂನ್ ಮಾಹೆಯಲ್ಲಿ ಇಷ್ಟು ಕಡಿಮೆ ಮಳೆ ಆಗಿದ್ದು 5 ವರ್ಷದ ಗರಿಷ್ಠ. ಆದರೆ ಖುಷಿಯ ಸಂಗತಿ ಎಂದರೆ ದಕ್ಷಿಣ ಭಾರತದಲ್ಲಿ ಮಾತ್ರ ಶೇ.14ರಷ್ಟು ಹೆಚ್ಚಿನ ಮಳೆ ಸುರಿದಿದೆ. ಉಳಿದೆಡೆ ಮಳೆ ಕೊರತೆ ಉಂಟಾಗಿದೆ. ಆದರೆ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ಈ ತಿಂಗಳಿನಲ್ಲಿ ಅಂದರೆ ಜುಲೈನಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಿನಲ್ಲಿ ಸುರಿಯಲಿರುವ ಭಾರೀ ಮಳೆಯಿಂದ ರಾಜ್ಯದ ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಲಿದ್ದು, ಜಲಾಶಯಗಳಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಮಳೆ ರೈತರಿಗೆ ಭಾರೀ ಖುಷಿ ತಂದಿದ್ದು, ಹೆಚ್ಚಿನ ಬೆಳೆ ಬೆಳೆಯಲ್ಲಿ ಅನ್ನದಾತರು ಅಂದಾಜು ಹಾಕುತ್ತಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…