ದೇಶ- ವಿದೇಶ

ದಕ್ಷಿಣ ಭಾರತದಲ್ಲಿ ಅಧಿಕ ಮುಂಗಾರು ಮಳೆ: ದೇಶದಲ್ಲಿ ಮಳೆ ಕೊರತೆ ಎಷ್ಟಿದೆ ಗೊತ್ತಾ.?

ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ.

ಜೂನ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು ಮಾತ್ರವೇ ಮಳೆ ಸುರಿದಿದೆ. ಅಂದರೆ ಒಟ್ಟಾರೆ ಮಳೆ ಕೊರತೆ ಪ್ರಮಾಣ ಶೇ.11ರಷ್ಟಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂನ್‌ ಮಾಹೆಯಲ್ಲಿ ಇಷ್ಟು ಕಡಿಮೆ ಮಳೆ ಆಗಿದ್ದು 5 ವರ್ಷದ ಗರಿಷ್ಠ. ಆದರೆ ಖುಷಿಯ ಸಂಗತಿ ಎಂದರೆ ದಕ್ಷಿಣ ಭಾರತದಲ್ಲಿ ಮಾತ್ರ ಶೇ.14ರಷ್ಟು ಹೆಚ್ಚಿನ ಮಳೆ ಸುರಿದಿದೆ. ಉಳಿದೆಡೆ ಮಳೆ ಕೊರತೆ ಉಂಟಾಗಿದೆ. ಆದರೆ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ಈ ತಿಂಗಳಿನಲ್ಲಿ ಅಂದರೆ ಜುಲೈನಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಿನಲ್ಲಿ ಸುರಿಯಲಿರುವ ಭಾರೀ ಮಳೆಯಿಂದ ರಾಜ್ಯದ ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಲಿದ್ದು, ಜಲಾಶಯಗಳಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಮಳೆ ರೈತರಿಗೆ ಭಾರೀ ಖುಷಿ ತಂದಿದ್ದು, ಹೆಚ್ಚಿನ ಬೆಳೆ ಬೆಳೆಯಲ್ಲಿ ಅನ್ನದಾತರು ಅಂದಾಜು ಹಾಕುತ್ತಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago