ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ.
ಜೂನ್ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು ಮಾತ್ರವೇ ಮಳೆ ಸುರಿದಿದೆ. ಅಂದರೆ ಒಟ್ಟಾರೆ ಮಳೆ ಕೊರತೆ ಪ್ರಮಾಣ ಶೇ.11ರಷ್ಟಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂನ್ ಮಾಹೆಯಲ್ಲಿ ಇಷ್ಟು ಕಡಿಮೆ ಮಳೆ ಆಗಿದ್ದು 5 ವರ್ಷದ ಗರಿಷ್ಠ. ಆದರೆ ಖುಷಿಯ ಸಂಗತಿ ಎಂದರೆ ದಕ್ಷಿಣ ಭಾರತದಲ್ಲಿ ಮಾತ್ರ ಶೇ.14ರಷ್ಟು ಹೆಚ್ಚಿನ ಮಳೆ ಸುರಿದಿದೆ. ಉಳಿದೆಡೆ ಮಳೆ ಕೊರತೆ ಉಂಟಾಗಿದೆ. ಆದರೆ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ಈ ತಿಂಗಳಿನಲ್ಲಿ ಅಂದರೆ ಜುಲೈನಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಜುಲೈ ತಿಂಗಳಿನಲ್ಲಿ ಸುರಿಯಲಿರುವ ಭಾರೀ ಮಳೆಯಿಂದ ರಾಜ್ಯದ ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯಾಗಲಿದ್ದು, ಜಲಾಶಯಗಳಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಮಳೆ ರೈತರಿಗೆ ಭಾರೀ ಖುಷಿ ತಂದಿದ್ದು, ಹೆಚ್ಚಿನ ಬೆಳೆ ಬೆಳೆಯಲ್ಲಿ ಅನ್ನದಾತರು ಅಂದಾಜು ಹಾಕುತ್ತಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…