ದೇಶ- ವಿದೇಶ

ಹೆಲಿಕಾಪ್ಟರ್‌ ಪತನ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

ಟೆಹ್ರಾನ್:‌ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಭಾನುವಾರ(ಮೇ.19) ಪತನಗೊಂಡಿದೆ. ಇಬ್ರಾಹಿಂ ರೈಸಿ ಸೇರಿದಂತೆ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಮೃತಪಟ್ಟಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ರಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಅಜೆರ್‌ ಪ್ರಾಂತ್ಯದ ಗಡಿಯ ಗುಡ್ಡಪ್ರದೇಶಗಳ ವ್ಯಾಪ್ತಿಯಲ್ಲಿ ಪತನಗೊಂಡಿದೆ. ಈ ಅಪಘಾತಕ್ಕೂ ಮುನ್ನ ಹೆಲಿಕಾಪ್ಟರ್‌ ನಿಯಂತ್ರಣ ಘಟಕದ ಸಂಪರ್ಕ ಕಡಿದುಕೊಂಡು ವೇಗವಾಗಿ ಭೂಸ್ಪರ್ಶ ಮಾಡಿದೆ ಎಂದು ಇರಾನ್‌ ಮಾಧ್ಯಮಗಳು ವರದಿ ಮಾಡಿವೆ.

ಹೆಲಿಕಾಪ್ಟರ್‌ ಪತನಗೊಂಡ ಪ್ರದೇಶಗಳಲ್ಲಿ ದಟ್ಟನೆಯ ಮಂಜು ಮಸುಕಿದ್ದು, ಶೋಧ ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾವೆ.

ಅಣೆಕಟ್ಟು ಉದ್ಘಾಟನೆಗೆ ಆಗಮಿಸಿದ್ದ ರೈಸಿ:
ಅಜೆರ್‌ಬೈಜ್‌ನಲ್ಲಿ ಅರಾಸ್‌ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಅಣೆಕಟ್ಟು ಉದ್ಘಾಟನೆಗಾಗಿ ರೈಸಿ ಬಂದಿದ್ದರು. ಈ ಕಾರ್ಯಕ್ರಮದಲ್ಲಿ ಅಜೆರ್‌ಬೈಜಾನ್‌ ಅಧ್ಯಕ್ಷ ಇಲ್ಹಾಮ್‌ ಅಲಿಯೆವ್‌ ಸಹ ಇದ್ದರು. ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಜೊತೆಗೆ ಬೆಂಗಾವಲಿನ ಎರಡು ಹೆಲಿಕಾಪ್ಟರ್‌ ಹಾರಾಟ ನಡೆಸಿದ್ದವು. ಅವು ಸುರಕ್ಷಿತವಾಗಿ ನಿಗದಿತ ಸ್ಥಳ ತಲುಪಿವೆ ಎನ್ನಲಾಗಿದೆ.

ಡ್ರೋನ್‌ ಮೂಲಕ ಕಾರ್ಯಾಚರಣೆ:
ಪತನಗೊಂಡ ಹೆಲಿಕಾಪ್ಟರ್‌ನ್ನು ಟರ್ಕಿಯ ಡ್ರೋನ್‌ ಪತ್ತೆ ಮಾಡಿದ್ದು, ಇರಾನ್‌ ರಕ್ಷಣಾ ಕಾರ್ಯಾಚರಣೆಯ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಹೆಲಿಕಾಪ್ಟರ್‌ ಪತನದ ಪ್ರದೇಶದಲ್ಲಿ ದಟ್ಟ ಮಂಜು ಆವರಿಸಿದ್ದು, ಶಾಖವಿರುವ ಪ್ರದೇಶವನ್ನು ಡ್ರೋನ್‌ ಮತ್ತೆ ಹಚ್ಚಿದೆ. ಅದುವೇ ಹೆಲಿಕಾಪ್ಟರ್‌ ಪತನದ ಜಾಗವಿರಬಹುದು ಎಂದು ನಂಬಲಾಗಿದೆ.

ಹೆಲಿಕಾಪ್ಟರ್‌ ಪತ್ತೆಗೆ ಟರ್ಕಿಯ ನೈಟ್‌ ವಿಷನ್‌ ಹೆಲಿಕಾಪ್ಟರ್‌ಗಳನ್ನು ಕಳುಹಿಸಲು ಇರಾನ್‌ ಮನವಿ ಮಾಡಿತ್ತು. ಅದರಂತೆ 6 ನೈಟ್‌ ವಿಷನ್‌ ಮತ್ತು ಶೋಧ ಕಾರ್ಯಾಚರಣೆಯ ಹೆಲಿಕಾಪ್ಟರ್‌ಗಳು ಮತ್ತು 32 ಮಂದಿ ಪರ್ವತಾರೋಹಿಗಳನ್ನು ಕಳುಹಿಸಲಾಗಿದೆ ಎಂದು ಟರ್ಕಿಯ ವಿಪತ್ತು ಮತ್ತು ತುರ್ತು ನಿರ್ವಹಣಾ ಸಚಿವಾಲಯ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

16 mins ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

1 hour ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

3 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

4 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

5 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

5 hours ago