ಭಾರತ-ಪಾಕಿಸ್ತಾನ ಸಂಘರ್ಷ : ಸೇನಾ ಪಡೆಗಳ ಜಂಟಿ ಪತ್ರಿಕಾಗೋಷ್ಠಿಯ ಮುಖ್ಯಂಶ ಇಲ್ಲಿವೆ

ಹೊಸದಿಲ್ಲಿ : ಪಾಕಿಸ್ತಾನ ತನ್ನ ಎಲ್ಲಾ ಸೇನೆಯನ್ನು ಗಡಿಯಲ್ಲಿ ನೀಯೋಜಿಸುತ್ತಿದೆ. ಉದ್ವಿಗ್ನ ಹೆಚ್ಚಿಸಲು ಪಾಕ್‌ ಪಡೆಗಳು ಯತ್ನಿಸುತ್ತಿದ್ದು, ಪಾಕ್‌ ದಾಳಿಗೆ ತಕ್ಕಂತೆ ಭಾರತ ಪ್ರತಿಕ್ರಿಯಿಸಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರ, ಕರ್ನಲ್‌ ಸೋಫಿಯಾ ಖುರೇಷಿ ಮತ್ತು ವಿಂಗ್‌ ಕಮಾಂಡರ್‌ ವ್ಯೋಮೊಕಾ ಸಿಂಗ್‌ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು ಹೀಗಿವೆ…

ಭಾರತದ ಏರ್‍ಬೇಸ್, ಎಸ್- 400 ಕ್ಷಿಪಣಿ ರಕ್ಷಣಾ ವ್ಯವಸ್ಥೆ (ಎಸ್-400 ಕ್ಷಿಪಣಿ) ಸುರಕ್ಷಿತವಾಗಿದ್ದು, ಯಾವುದೇ ಹಾನಿಯಾಗಿಲ್ಲ.
ಸುದರ್ಶನ ಚಕ್ರ ಎಂದು ಕರೆಯಲ್ಪಡುವ ಎಸ್-400 ಏರ್ ಡಿಫೆನ್ಸ್ ಸಿಸ್ಟಂ ಕ್ಷಿಪಣಿಗೆ ಹಾನಿಯಾಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಸುದ್ದಿಗಳು ಆಧಾರ ರಹಿತ, ಸುಳ್ಳು ಸುದ್ದಿ.

ಗುರುವಾರ ರಾತ್ರಿ ಪಾಕಿಸ್ತಾನ ಆವಂತಿಪೋರಾ, ಶ್ರೀನಗರ, ಜಮು, ಪಠಾಣ್‍ಕೋಟ್, ಅಮೃತಸರ, ಲುಧಿಯಾನ ಮತ್ತು ಭುಜ್‍ನಲ್ಲಿರುವ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಲು ಮುಂದಾಗಿತ್ತು. ಆದರೆ ಈ ಎಲ್ಲ ಕ್ಷಿಪಣಿಗಳನ್ನು ಎಸ್-400 ಏರ್ ಡಿಫ್ಸೆನ್ಸ್ ಸಿಸ್ಟಂ ಕ್ಷಣ ಮಾತ್ರದಲ್ಲೇ ಹೊಡೆದುರುಳಿಸಿತ್ತು.

ಪಾಕ್‌ ಕ್ರಮಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಾಗಿದೆ. ಧಾರ್ಮಿಕ ಸ್ಥಳಗಳ ಮೇಲೆ ಭಾರತ ಕ್ಷಿಪಣಿ ದಾಳಿ ಎಂಬುದು ಹಾಸ್ಯಾಸ್ಪದ, ಪಾಕ್‌ ಪಡೆ ನಡೆಸಿದ ಶೆಲ್‌ ದಾಳಿಯಲ್ಲಿ ಒರ್ವ ಅಧಿಕಾರಿ ಹುತಾತ್ಮ, ಭಾರತದ ವಾಯುನೆಲೆಗೆ ಯಾವುದೇ ಹಾನಿಯಾಗಿಲ್ಲ ಎನ್ನುವುದಕ್ಕೆ ಸುದ್ದಿಗೋಷ್ಠಿಯಲ್ಲಿ ಸದ್ಯದ ಚಿತ್ರಗಳನ್ನು ತೋರಿಸಲಾಯಿತು.

ಇದನ್ನೂ ಓದಿ:- ಸೂಕ್ಷ್ಮ ಪ್ರದೇಶದಲ್ಲಿ ಸಿಬ್ಬಂದಿ ನಿಯೋಜನೆ ; ಗೃಹ ಸಚಿವ ಪರಮೇಶ್ವರ್‌ 

ಪಾಕಿಸ್ತಾನವು ಉಧಂಪುರ, ಪಠಾಣ್‍ಕೋಟ್ ಮತ್ತು ಭಟಿಂಡಾದಲ್ಲಿನ ಭಾರತೀಯ ವಾಯುನೆಲೆಗಳು ಮತ್ತು ಇತರ 23 ಭಾರತೀಯ ನಗರಗಳ ಮೇಲೆ ದಾಳಿ ಮಾಡಿತ್ತು. ಕ್ಷಿಪಣಿ ಡ್ರೋನ್ ದಾಳಿಗಳನ್ನು ನಾವು ತಟಸ್ಥಗೊಳಿಸಿದ್ದೇವೆ.

ಪಾಕ್ ಸೇನೆ ಭಾರತದ ನಾಗರಿಕರನ್ನು, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿವೆ. ಪ್ರಯಾಣಿಕ ವಿಮಾನವನ್ನು ಗುರಾಣಿಯನ್ನಾಗಿ ಬಳಸಿಕೊಂಡು ಭಾರತದ ಮೇಲೆ ದಾಳಿ ನಡೆಸುತ್ತಿದೆ.

ಸೇನಾ ಮೂಲಸೌರ್ಕರ್ಯಗಳಿಗೆ ಭಾರಿ ಹಾನಿಯಾಗಿದೆ ಎಂಬ ಪಾಕ್‌ ಹೇಳಿಕೆ ಸಂಪೂರ್ಣ ಸುಳ್ಳು ಎಂದು ಪತ್ರಿಕಾಗೋಷ್ಠಿಯಲ್ಲಿ ಖುರೇಷಿ ಪ್ರಾತಿಪಾದಿಸಿದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago