ಭಾರತ-ಪಾಕಿಸ್ತಾನ ಸಂಘರ್ಷ : ಸೇನಾ ಪಡೆಗಳ ಜಂಟಿ ಪತ್ರಿಕಾಗೋಷ್ಠಿಯ ಮುಖ್ಯಂಶ ಇಲ್ಲಿವೆ

ಹೊಸದಿಲ್ಲಿ : ಪಾಕಿಸ್ತಾನ ತನ್ನ ಎಲ್ಲಾ ಸೇನೆಯನ್ನು ಗಡಿಯಲ್ಲಿ ನೀಯೋಜಿಸುತ್ತಿದೆ. ಉದ್ವಿಗ್ನ ಹೆಚ್ಚಿಸಲು ಪಾಕ್‌ ಪಡೆಗಳು ಯತ್ನಿಸುತ್ತಿದ್ದು, ಪಾಕ್‌ ದಾಳಿಗೆ ತಕ್ಕಂತೆ ಭಾರತ ಪ್ರತಿಕ್ರಿಯಿಸಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರ, ಕರ್ನಲ್‌ ಸೋಫಿಯಾ ಖುರೇಷಿ ಮತ್ತು ವಿಂಗ್‌ ಕಮಾಂಡರ್‌ ವ್ಯೋಮೊಕಾ ಸಿಂಗ್‌ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು ಹೀಗಿವೆ…

ಭಾರತದ ಏರ್‍ಬೇಸ್, ಎಸ್- 400 ಕ್ಷಿಪಣಿ ರಕ್ಷಣಾ ವ್ಯವಸ್ಥೆ (ಎಸ್-400 ಕ್ಷಿಪಣಿ) ಸುರಕ್ಷಿತವಾಗಿದ್ದು, ಯಾವುದೇ ಹಾನಿಯಾಗಿಲ್ಲ.
ಸುದರ್ಶನ ಚಕ್ರ ಎಂದು ಕರೆಯಲ್ಪಡುವ ಎಸ್-400 ಏರ್ ಡಿಫೆನ್ಸ್ ಸಿಸ್ಟಂ ಕ್ಷಿಪಣಿಗೆ ಹಾನಿಯಾಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಸುದ್ದಿಗಳು ಆಧಾರ ರಹಿತ, ಸುಳ್ಳು ಸುದ್ದಿ.

ಗುರುವಾರ ರಾತ್ರಿ ಪಾಕಿಸ್ತಾನ ಆವಂತಿಪೋರಾ, ಶ್ರೀನಗರ, ಜಮು, ಪಠಾಣ್‍ಕೋಟ್, ಅಮೃತಸರ, ಲುಧಿಯಾನ ಮತ್ತು ಭುಜ್‍ನಲ್ಲಿರುವ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಲು ಮುಂದಾಗಿತ್ತು. ಆದರೆ ಈ ಎಲ್ಲ ಕ್ಷಿಪಣಿಗಳನ್ನು ಎಸ್-400 ಏರ್ ಡಿಫ್ಸೆನ್ಸ್ ಸಿಸ್ಟಂ ಕ್ಷಣ ಮಾತ್ರದಲ್ಲೇ ಹೊಡೆದುರುಳಿಸಿತ್ತು.

ಪಾಕ್‌ ಕ್ರಮಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಾಗಿದೆ. ಧಾರ್ಮಿಕ ಸ್ಥಳಗಳ ಮೇಲೆ ಭಾರತ ಕ್ಷಿಪಣಿ ದಾಳಿ ಎಂಬುದು ಹಾಸ್ಯಾಸ್ಪದ, ಪಾಕ್‌ ಪಡೆ ನಡೆಸಿದ ಶೆಲ್‌ ದಾಳಿಯಲ್ಲಿ ಒರ್ವ ಅಧಿಕಾರಿ ಹುತಾತ್ಮ, ಭಾರತದ ವಾಯುನೆಲೆಗೆ ಯಾವುದೇ ಹಾನಿಯಾಗಿಲ್ಲ ಎನ್ನುವುದಕ್ಕೆ ಸುದ್ದಿಗೋಷ್ಠಿಯಲ್ಲಿ ಸದ್ಯದ ಚಿತ್ರಗಳನ್ನು ತೋರಿಸಲಾಯಿತು.

ಇದನ್ನೂ ಓದಿ:- ಸೂಕ್ಷ್ಮ ಪ್ರದೇಶದಲ್ಲಿ ಸಿಬ್ಬಂದಿ ನಿಯೋಜನೆ ; ಗೃಹ ಸಚಿವ ಪರಮೇಶ್ವರ್‌ 

ಪಾಕಿಸ್ತಾನವು ಉಧಂಪುರ, ಪಠಾಣ್‍ಕೋಟ್ ಮತ್ತು ಭಟಿಂಡಾದಲ್ಲಿನ ಭಾರತೀಯ ವಾಯುನೆಲೆಗಳು ಮತ್ತು ಇತರ 23 ಭಾರತೀಯ ನಗರಗಳ ಮೇಲೆ ದಾಳಿ ಮಾಡಿತ್ತು. ಕ್ಷಿಪಣಿ ಡ್ರೋನ್ ದಾಳಿಗಳನ್ನು ನಾವು ತಟಸ್ಥಗೊಳಿಸಿದ್ದೇವೆ.

ಪಾಕ್ ಸೇನೆ ಭಾರತದ ನಾಗರಿಕರನ್ನು, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿವೆ. ಪ್ರಯಾಣಿಕ ವಿಮಾನವನ್ನು ಗುರಾಣಿಯನ್ನಾಗಿ ಬಳಸಿಕೊಂಡು ಭಾರತದ ಮೇಲೆ ದಾಳಿ ನಡೆಸುತ್ತಿದೆ.

ಸೇನಾ ಮೂಲಸೌರ್ಕರ್ಯಗಳಿಗೆ ಭಾರಿ ಹಾನಿಯಾಗಿದೆ ಎಂಬ ಪಾಕ್‌ ಹೇಳಿಕೆ ಸಂಪೂರ್ಣ ಸುಳ್ಳು ಎಂದು ಪತ್ರಿಕಾಗೋಷ್ಠಿಯಲ್ಲಿ ಖುರೇಷಿ ಪ್ರಾತಿಪಾದಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago