ಭಾರತ-ಪಾಕಿಸ್ತಾನ ಸಂಘರ್ಷ : ಸೇನಾ ಪಡೆಗಳ ಜಂಟಿ ಪತ್ರಿಕಾಗೋಷ್ಠಿಯ ಮುಖ್ಯಂಶ ಇಲ್ಲಿವೆ

ಹೊಸದಿಲ್ಲಿ : ಪಾಕಿಸ್ತಾನ ತನ್ನ ಎಲ್ಲಾ ಸೇನೆಯನ್ನು ಗಡಿಯಲ್ಲಿ ನೀಯೋಜಿಸುತ್ತಿದೆ. ಉದ್ವಿಗ್ನ ಹೆಚ್ಚಿಸಲು ಪಾಕ್‌ ಪಡೆಗಳು ಯತ್ನಿಸುತ್ತಿದ್ದು, ಪಾಕ್‌ ದಾಳಿಗೆ ತಕ್ಕಂತೆ ಭಾರತ ಪ್ರತಿಕ್ರಿಯಿಸಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರ, ಕರ್ನಲ್‌ ಸೋಫಿಯಾ ಖುರೇಷಿ ಮತ್ತು ವಿಂಗ್‌ ಕಮಾಂಡರ್‌ ವ್ಯೋಮೊಕಾ ಸಿಂಗ್‌ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು ಹೀಗಿವೆ…

ಭಾರತದ ಏರ್‍ಬೇಸ್, ಎಸ್- 400 ಕ್ಷಿಪಣಿ ರಕ್ಷಣಾ ವ್ಯವಸ್ಥೆ (ಎಸ್-400 ಕ್ಷಿಪಣಿ) ಸುರಕ್ಷಿತವಾಗಿದ್ದು, ಯಾವುದೇ ಹಾನಿಯಾಗಿಲ್ಲ.
ಸುದರ್ಶನ ಚಕ್ರ ಎಂದು ಕರೆಯಲ್ಪಡುವ ಎಸ್-400 ಏರ್ ಡಿಫೆನ್ಸ್ ಸಿಸ್ಟಂ ಕ್ಷಿಪಣಿಗೆ ಹಾನಿಯಾಗಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಸುದ್ದಿಗಳು ಆಧಾರ ರಹಿತ, ಸುಳ್ಳು ಸುದ್ದಿ.

ಗುರುವಾರ ರಾತ್ರಿ ಪಾಕಿಸ್ತಾನ ಆವಂತಿಪೋರಾ, ಶ್ರೀನಗರ, ಜಮು, ಪಠಾಣ್‍ಕೋಟ್, ಅಮೃತಸರ, ಲುಧಿಯಾನ ಮತ್ತು ಭುಜ್‍ನಲ್ಲಿರುವ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಲು ಮುಂದಾಗಿತ್ತು. ಆದರೆ ಈ ಎಲ್ಲ ಕ್ಷಿಪಣಿಗಳನ್ನು ಎಸ್-400 ಏರ್ ಡಿಫ್ಸೆನ್ಸ್ ಸಿಸ್ಟಂ ಕ್ಷಣ ಮಾತ್ರದಲ್ಲೇ ಹೊಡೆದುರುಳಿಸಿತ್ತು.

ಪಾಕ್‌ ಕ್ರಮಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಾಗಿದೆ. ಧಾರ್ಮಿಕ ಸ್ಥಳಗಳ ಮೇಲೆ ಭಾರತ ಕ್ಷಿಪಣಿ ದಾಳಿ ಎಂಬುದು ಹಾಸ್ಯಾಸ್ಪದ, ಪಾಕ್‌ ಪಡೆ ನಡೆಸಿದ ಶೆಲ್‌ ದಾಳಿಯಲ್ಲಿ ಒರ್ವ ಅಧಿಕಾರಿ ಹುತಾತ್ಮ, ಭಾರತದ ವಾಯುನೆಲೆಗೆ ಯಾವುದೇ ಹಾನಿಯಾಗಿಲ್ಲ ಎನ್ನುವುದಕ್ಕೆ ಸುದ್ದಿಗೋಷ್ಠಿಯಲ್ಲಿ ಸದ್ಯದ ಚಿತ್ರಗಳನ್ನು ತೋರಿಸಲಾಯಿತು.

ಇದನ್ನೂ ಓದಿ:- ಸೂಕ್ಷ್ಮ ಪ್ರದೇಶದಲ್ಲಿ ಸಿಬ್ಬಂದಿ ನಿಯೋಜನೆ ; ಗೃಹ ಸಚಿವ ಪರಮೇಶ್ವರ್‌ 

ಪಾಕಿಸ್ತಾನವು ಉಧಂಪುರ, ಪಠಾಣ್‍ಕೋಟ್ ಮತ್ತು ಭಟಿಂಡಾದಲ್ಲಿನ ಭಾರತೀಯ ವಾಯುನೆಲೆಗಳು ಮತ್ತು ಇತರ 23 ಭಾರತೀಯ ನಗರಗಳ ಮೇಲೆ ದಾಳಿ ಮಾಡಿತ್ತು. ಕ್ಷಿಪಣಿ ಡ್ರೋನ್ ದಾಳಿಗಳನ್ನು ನಾವು ತಟಸ್ಥಗೊಳಿಸಿದ್ದೇವೆ.

ಪಾಕ್ ಸೇನೆ ಭಾರತದ ನಾಗರಿಕರನ್ನು, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿವೆ. ಪ್ರಯಾಣಿಕ ವಿಮಾನವನ್ನು ಗುರಾಣಿಯನ್ನಾಗಿ ಬಳಸಿಕೊಂಡು ಭಾರತದ ಮೇಲೆ ದಾಳಿ ನಡೆಸುತ್ತಿದೆ.

ಸೇನಾ ಮೂಲಸೌರ್ಕರ್ಯಗಳಿಗೆ ಭಾರಿ ಹಾನಿಯಾಗಿದೆ ಎಂಬ ಪಾಕ್‌ ಹೇಳಿಕೆ ಸಂಪೂರ್ಣ ಸುಳ್ಳು ಎಂದು ಪತ್ರಿಕಾಗೋಷ್ಠಿಯಲ್ಲಿ ಖುರೇಷಿ ಪ್ರಾತಿಪಾದಿಸಿದರು.

ಆಂದೋಲನ ಡೆಸ್ಕ್

Recent Posts

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

60 mins ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

2 hours ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

4 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

5 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

5 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

5 hours ago