ದೇಶ- ವಿದೇಶ

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

2015-16ರ ಆರ್ಥಿಕ ವರ್ಷದಲ್ಲಿ ಅಗ್ರ ಶ್ರೇಯಾಂಕಿತ ತಾರೆ ಗಳಿಸಿದ ಹೆಚ್ಚುವರಿ ಆದಾಯವನ್ನು ಬಹಿರಂಗಪಡಿಸದ ಆರೋಪಕ್ಕೆ ಸಂಬಂಧಿಸಿದಂತೆ ಅವರಿಗೆ ದಂಡ ವಿಧಿಸಲಾಗಿತ್ತು. ಈ ದಂಡವನ್ನು ಪ್ರಶ್ನಿಸಿ ವಿಜಯ್ 2022 ರಲ್ಲಿ ಅರ್ಜಿ ಸಲ್ಲಿಸಿದ್ದರು ಮತ್ತು ನ್ಯಾಯಮೂರ್ತಿ ಸೆಂಥಿಲ್‍ಕುಮಾರ್ ರಾಮಮೂರ್ತಿ ಕಳೆದ ತಿಂಗಳು ರಿಟ್ ಅರ್ಜಿಯ ಮೇಲಿನ ಆದೇಶಗಳನ್ನು ಕಾಯ್ದಿರಿಸಿದ್ದರು. ಇಂದು ತೀರ್ಪು ಹೊರಡಿಸಿರುವ ನ್ಯಾಯಲಯ ವಿಜಯ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

18 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

2 hours ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

2 hours ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

2 hours ago

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…

2 hours ago

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

4 hours ago