chanda kochhar couple
ಹೊಸದಿಲ್ಲಿ: ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್ ಅವರನ್ನು ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ನೀಡಿದೆ.
ಈ ಇಬ್ಬರನ್ನೂ 2022ರ ಡಿಸೆಂಬರ್ 23ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.ಬಳಿಕ ಅವರನ್ನು ಸಿಬಿಐ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಸೂಚಿಸಿತ್ತು. ಚಂದಾ ಕೊಚ್ಚರ್ ಮತ್ತು ದೀಪಕ್ ಕೊಚ್ಚರ್ ಅವರ ಬಂಧನ ಕಾನೂನು ಸಮ್ಮತವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಇದೀಗ ಅಭಿಪ್ರಾಯಪಟ್ಟಿದೆ.
ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್ಗೆ ಒದಗಿಸಿದ 3,000 ಕೋಟಿ ರೂ. ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 23 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರನ್ನು ಬಂಧಿಸಿತ್ತು.
ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ತನ್ನ ಬಂಧನ ಕಾನೂನುಬಾಹಿರವಾಗಿದೆ, ತನಿಖೆಯನ್ನು ಆರಂಭಿಸಲು ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ. ಈ ತನಿಖೆಯನ್ನು ಪ್ರಾರಂಭಿಸಲು ಸಂಸ್ಥೆಯು ಅಂತಹ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಕೊಚ್ಚರ್ ದಂಪತಿ ನ್ಯಾಯಾಲಯದ ಮುಂದೆ ವಾದಿಸಿದರು.
ಪ್ರಕರಣದ ಹಿನ್ನೆಲೆ: 2012 ರಲ್ಲಿ ಐಸಿಐಸಿಐ ಬ್ಯಾಂಕ್ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…