ದೇಶ- ವಿದೇಶ

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಗೆ ಹೈಕೋರ್ಟ್ ಜಾಮೀನು

ಹೊಸದಿಲ್ಲಿ: ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ  ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್ ​ ಅವರನ್ನು ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ನೀಡಿದೆ.

ಈ ಇಬ್ಬರನ್ನೂ 2022ರ ಡಿಸೆಂಬರ್ 23ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.ಬಳಿಕ ಅವರನ್ನು ಸಿಬಿಐ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಸೂಚಿಸಿತ್ತು. ಚಂದಾ ಕೊಚ್ಚರ್ ಮತ್ತು ದೀಪಕ್ ಕೊಚ್ಚರ್ ಅವರ ಬಂಧನ ಕಾನೂನು ಸಮ್ಮತವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಇದೀಗ ಅಭಿಪ್ರಾಯಪಟ್ಟಿದೆ.

ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್‌ಗೆ ಒದಗಿಸಿದ  3,000 ಕೋಟಿ ರೂ. ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 23 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರನ್ನು ಬಂಧಿಸಿತ್ತು.

ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ತನ್ನ ಬಂಧನ ಕಾನೂನುಬಾಹಿರವಾಗಿದೆ, ತನಿಖೆಯನ್ನು ಆರಂಭಿಸಲು ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ. ಈ ತನಿಖೆಯನ್ನು ಪ್ರಾರಂಭಿಸಲು ಸಂಸ್ಥೆಯು ಅಂತಹ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಕೊಚ್ಚರ್‌ ದಂಪತಿ ನ್ಯಾಯಾಲಯದ ಮುಂದೆ ವಾದಿಸಿದರು.

ಪ್ರಕರಣದ ಹಿನ್ನೆಲೆ: 2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್​ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್​ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.

 

lokesh

Recent Posts

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

43 mins ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

1 hour ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

1 hour ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

2 hours ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

2 hours ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

2 hours ago