chanda kochhar couple
ಹೊಸದಿಲ್ಲಿ: ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್ ಅವರನ್ನು ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ನೀಡಿದೆ.
ಈ ಇಬ್ಬರನ್ನೂ 2022ರ ಡಿಸೆಂಬರ್ 23ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.ಬಳಿಕ ಅವರನ್ನು ಸಿಬಿಐ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಸೂಚಿಸಿತ್ತು. ಚಂದಾ ಕೊಚ್ಚರ್ ಮತ್ತು ದೀಪಕ್ ಕೊಚ್ಚರ್ ಅವರ ಬಂಧನ ಕಾನೂನು ಸಮ್ಮತವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಇದೀಗ ಅಭಿಪ್ರಾಯಪಟ್ಟಿದೆ.
ಚಂದಾ ಕೊಚ್ಚರ್ ಖಾಸಗಿ ವಲಯದ ಬ್ಯಾಂಕ್ನ ಮುಖ್ಯಸ್ಥರಾಗಿದ್ದಾಗ ವಿಡಿಯೋಕಾನ್ ಗ್ರೂಪ್ಗೆ ಒದಗಿಸಿದ 3,000 ಕೋಟಿ ರೂ. ಹೆಚ್ಚು ಸಾಲದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿ ಡಿಸೆಂಬರ್ 23 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರನ್ನು ಬಂಧಿಸಿತ್ತು.
ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ತನ್ನ ಬಂಧನ ಕಾನೂನುಬಾಹಿರವಾಗಿದೆ, ತನಿಖೆಯನ್ನು ಆರಂಭಿಸಲು ಕಾಯಿದೆಯ ಸೆಕ್ಷನ್ 17A ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ. ಈ ತನಿಖೆಯನ್ನು ಪ್ರಾರಂಭಿಸಲು ಸಂಸ್ಥೆಯು ಅಂತಹ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಕೊಚ್ಚರ್ ದಂಪತಿ ನ್ಯಾಯಾಲಯದ ಮುಂದೆ ವಾದಿಸಿದರು.
ಪ್ರಕರಣದ ಹಿನ್ನೆಲೆ: 2012 ರಲ್ಲಿ ಐಸಿಐಸಿಐ ಬ್ಯಾಂಕ್ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಾಲಗಳನ್ನು ನಂತರ ಅನುತ್ಪಾದಕ ಆಸ್ತಿ (ಎನ್ಪಿಎ) ಎಂದು ಘೋಷಿಸಲಾಗಿತ್ತು. ಇದರಿಂದ ಬ್ಯಾಂಕ್ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…