ದೇಶ- ವಿದೇಶ

ಮಧ್ಯರಾತ್ರಿಯಿಂದ ವಾಹನ ಸವಾರರಿಗೆ ಹೆದ್ದಾರಿ ಟೋಲ್ ಶಾಕ್

ಬೆಂಗಳೂರು-ರಾಜ್ಯದಲ್ಲಿ ಬೆಲೆ ಏರಿಕೆ ಶಾಕ್ ದಿನದಿಂದ ದಿನಕ್ಕೆ ಜನಸಾಮಾನ್ಯರನ್ನು ಬಾಧಿಸುತ್ತಿದೆ. ಮಧ್ಯರಾತ್ರಿಯಿಂದ ವಾಹನ ಸವಾರರಿಗೆ ಹೆದ್ದಾರಿ ಟೋಲ್ ಶಾಕ್ ಎದುರಾಗಿದೆ.

ಬೆಂಗಳೂರು ಹೊರವಲಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾಸನ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆಯಲ್ಲಿ ಸಂಚಾರಿಸುವ ವಾಹನ ಸವಾರರಿಗೆ ಇಂದಿನಿಂದ ಸೆ.1ರಿಂದ ದರ ಏರಿಕೆ ಮಾಡಿ ಶಾಕ್ ನೀಡಿದೆ.

ನೆಲಮಂಗಲ ದೇವಿಹಳ್ಳಿ ಟೋಲ್‍ನಲ್ಲಿ ಇಂದು ದರ ಏರಿಕೆಯಾದರಿಂದ ಬೆಳಿಗ್ಗೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿಯ ಟೋಲ್‍ಗಳಲ್ಲಿ ವಾಹನ ಸವಾರರಿಗೆ ಹೆಚ್ಚಿನ ಹೊರೆ ಬೀಳಲಿದೆ.

ದೊಡ್ಡಕರೇನಹಳ್ಳಿ ಟೋಲ್ ಹಾಗೂ ಕಾರಬೈಲು ಟೋಲ್ ಪ್ಲಾಜಾಗಳಲ್ಲಿ ದರ ಏರಿಕೆಯಾಗಿದೆ. ಏಕಮುಖ ಸಂಚಾರಕ್ಕೆ 5 ರೂಪಾಯಿ, ದ್ವಿಮುಖ ಸಂಚಾರಕ್ಕೆ 10 ರೂಪಾಯಿ ದರ ಏರಿಕೆ ಮಾಡಲಾಗಿದೆ.

ಫಾಸ್ಟ್‌ಟ್ಯಾಗ್ ಇರುವ ಕಾರು, ಜೀಪು, ವ್ಯಾನ್ ಹಾಗೂ ಹಗುರ ವಾಹನಗಳಿಗೆ ಏಕಮುಖ ಸಂಚಾರಕ್ಕೆ 55 ರೂ ಇತ್ತು. ಮಧ್ಯರಾತ್ರಿಯಿಂದ ಇದರ ದರ 60 ರೂಗೆ ಏರಿಕೆ ಆಗುತ್ತದೆ. ದಿನದ ಸಂಚಾರವು 85 ರೂನಿಂದ 90 ರೂಗೆ ಏರಿಕೆ ಆಗುತ್ತಿದೆ. ಫಾಸ್‍ಟ್ಯಾಗ್ ಇಲ್ಲದ ವಾಹನಗಳಿಗೆ ಏಕಮುಖ ಸಂಚಾರಕ್ಕೆ ಟೋಲ್ ದರ 110 ರೂನಿಂದ 120 ರೂಗೆ ಏರಿಕೆ ಆಗುತ್ತಿದೆ.‌

ಹಗುರ ವಾಣಿಜ್ಯ ವಾಹನ ಹಾಗೂ ಸರಕು ಸಾಗಣೆ ವಾಹನಗಳಾದರೆ ಏಕಮುಖ ಸಂಚಾರಕ್ಕೆ 100 ರೂ, ದಿನದ ಸಂಚಾರಕ್ಕೆ 155 ರೂಗೆ ಏರಿಸಲಾಗುತ್ತಿದೆ.

ಒಟ್ಟಾರೆ ರಾಜ್ಯದಲ್ಲಿ ಜನಸಾಮಾನ್ಯರು ಒಂದಲ್ಲ ಒಂದು ರೀತಿ ದರ ಏರಿಕೆಯಿಂದ ಪರಿತಪ್ಪಿಸುತ್ತಿದ್ದಾರೆ. ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರ ದರ ಏರಿಕೆಯಿಂದ ಈ ರಸ್ತೆಯಲ್ಲಿ ಸಂಚಾರ ಮಾಡುವ ಸವಾರರಿಗೆ ಟೋಲ್ ಶಾಕ್ ಎದುರಾಗಿದೆ.

ನೆರೆಯ ತಮಿಳು ನಾಡಿನ ಹಲವು ಟೋಲ್‍ನಲ್ಲೂ ದರ ಏಕೆಯಾಗಿದೆ. ಖಾಸಗಿ ವಾಹನ ಸವಾರರು ತಲೆಕೆಡಸಿಕೊಳ್ಳದಿದ್ದರೂ ವಾಣಿಜ್ಯ ಸಾರಿಗೆ ವಾಹನ ಮಾಲೀಕರು ಹೆಚ್ಚಾಗಿ ಆಕ್ರೋಶ ಹೊರಹಾಕಿದ್ದಾರೆ.

ದೇಶದ ಹಲವು ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದರ ಪರಿಷ್ಕರಣೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

4 mins ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

19 mins ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

20 mins ago

ಓದುಗರ ಪತ್ರ: ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಿ

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…

21 mins ago

ಓದುಗರ ಪತ್ರ: ವಾಣಿಜ್ಯ ಸಿಲಿಂಡರ್ ದರ ಏರಿಕೆ ಬರೆ

ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್‌ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್‌ಗಳಲ್ಲಿ…

22 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

4 hours ago