ದೇಶ- ವಿದೇಶ

400 ಕೋಟಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳ ಹೈಜಾಕ್‌ : ಚೋರ್ಲಾ ಘಾಟ್‌ನಲ್ಲಿ ನಡೆದ ದರೋಡೆ ಬಗ್ಗೆ ಎಸ್‌ಪಿ ಹೇಳಿದ್ದಿಷ್ಟು

ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಭಾನುವಾರ ಸುದ್ದಿಗೋಷ್ಠಿ ನಡೆಸಿ ಬೆಳಗಾವಿ ಎಸ್​​ಪಿ ಕೆ.ರಾಮರಾಜನ್​ ಮಾತನಾಡಿದ್ದು, ಮಹಾರಾಷ್ಟ್ರ ಪೊಲೀಸರು ತನಿಖೆ ಮಾಡುತ್ತಿದ್ದು, ನಾವು ಸಹಕಾರ ಕೊಡುತ್ತೇವೆ. ಚೋರ್ಲಾ ಘಾಟ್ ಮೂರು ರಾಜ್ಯಗಳಿಗೆ ಸಂಬಂಧಿಸಿದೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಜನವರಿ 6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ನಮಗೆ ಪತ್ರ ಬರುತ್ತೆ. ಚೋರ್ಲಾ ಘಾಟ್​ನಲ್ಲಿ ರಾಬರಿಯಾಗಿದೆ. ಹಳೆಯ 400 ಕೋಟಿ ರೂ ಆಗಿರಬಹುದು ಅಂತಾ ಪತ್ರದಲ್ಲಿತ್ತು ಎಂದು ಮಾಹಿತಿ ನೀಡಿದರು.

ವಿಶಾಲ್ ನಾಯ್ಡು ಎಂಬಾತ ನಾಸಿಕ್​ನಲ್ಲಿ ಅಕ್ಟೋಬರ್ 22ರಂದು ಸಂದೀಪ್ ಪಾಟೀಲ್ ಎಂಬಾತನ ಕಿಡ್ನ್ಯಾಪ್ ಮಾಡಿರುತ್ತಾರೆ. ಅಕ್ಟೋಬರ್ 16ರಂದು 400 ಕೋಟಿ ರೂ ಅಪಹರಣವಾಗಿದೆ. ಆ ಹಣ ಎಲ್ಲಿಗೆ ಹೋಗಿದೆ ಅಂತಾ ಪ್ರಶ್ನೆ ಮಾಡುತ್ತಾರೆ. ಈ ರಾಬರಿ ಆಗಿದ್ದು ಚೋರ್ಲಾ ಘಾಟ್​ನಲ್ಲಿ ಅಂತಾ ಪತ್ರದಲ್ಲಿ ಉಲ್ಲೇಖವಿದೆ. ಈ ಕಾರಣಕ್ಕೆ ನಮ್ಮ ಖಾನಾಪುರದ ಸಬ್-ಇನ್ಸ್‌ಪೆಕ್ಟರ್ ಸೇರಿ ಒಂದು ತಂಡವನ್ನ ಕಳುಹಿಸಿದ್ದೇವೆ ಎಂದರು.

ಎಸ್ಐಟಿ ತಂಡ ಕೂಡ ರಚನೆ ಆಗಿದೆ. ಸಂದೀಪ್ ಪಾಟೀಲ್ ಬಳಿ ನಮ್ಮವರು ಮಾತಾಡಿದ್ದಾರೆ. ಆತ ಹೇಳಿರುವ ಪ್ರಕಾರ ಕಿಡ್ನ್ಯಾಪ್ ಮಾಡಿದವರು ಆತನಿಗೆ ದರೋಡೆ ಬಗ್ಗೆ ಹೇಳಿದ್ದಾರೆ. ಇಲ್ಲಿ ಘಟನೆ ಆಗಿರುವ ಕಾರಣ ಯಾರು ಬಂದು ದೂರು ಕೊಟ್ಟರೂ ನಾವು ತೆಗೆದುಕೊಳ್ಳುತ್ತೇವೆ. ಚೋರ್ಲಾ ಘಾಟ್​ನಲ್ಲಿ ಹೊಸದಾಗಿ ಸಿಸಿಟಿವಿ ಅಳವಡಿಕೆ ಮಾಡುತ್ತೇವೆ ಎಂದು ಎಸ್​​ಪಿ ಕೆ.ರಾಮರಾಜನ್ ಹೇಳಿದ್ದಾರೆ.

ದರೋಡೆಕೋರರು ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡಿದ್ದೇಕೆ?
ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮಧ್ಯೆ ಇರುವ ಚೋರ್ಲಾ ಘಾಟ್ ಪ್ರದೇಶದಲ್ಲಿ ನೆಟ್ವರ್ಕ್​ ಬರುವುದಿಲ್ಲ. ಗೋವಾದ ಕೇರಿಯಿಂದ ಬೆಳಗಾವಿಯ ಜಾಂಬೋಟಿವರೆಗೂ 4 ಗಂಟೆ ಸಂಪರ್ಕ ಕಡಿತಗೊಳ್ಳುತ್ತೆ. ಗೋವಾದಿಂದ ಚೋರ್ಲಾ ಘಾಟ್​​ಗೆ ಬರಲು 3 ಗಂಟೆ ಸಮಯ ಬೇಕು. ಚೋರ್ಲಾದಿಂದ ಮಹಾರಾಷ್ಟ್ರಕ್ಕೆ ಅರಣ್ಯ ಅಂಚಿನ ದಾರಿ ಕನೆಕ್ಟ್ ಆಗುತ್ತೆ. ಚೋರ್ಲಾದಲ್ಲಿ ಸಣ್ಣಪುಟ್ಟ ವಾಹನ ಹೋಗುವಷ್ಟು ಕಾಲುದಾರಿ ಇದೆ. ಕಂಟೇನರ್​ನಿಂದ ಮಿನಿ ಗೂಡ್ಸ್​​ಗೆ ಡಂಪ್ ಮಾಡಿ ಬಳಿಕ ಹಣ ಸಾಗಿಸಿದ್ರಾ, ಈ ಪ್ರದೇಶದಲ್ಲಿ ದರೋಡೆ ಮಾಡಿದರೆ ಯಾರಿಗೂ ಸಂಪರ್ಕ ಸಿಗೋದಿಲ್ಲ, ಹೀಗಾಗಿ ಈ ಎಲ್ಲಾ ವಿಚಾರಗಳಿಂದ ದರೋಡೆಕೋರರು ಚೋರ್ಲಾ ಘಾಟ್ ಆಯ್ಕೆ ಮಾಡಿಕೊಂಡರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

6 ಆರೋಪಿಗಳು ಅಂದರ್
400 ಕೋಟಿ ರೂ ದರೋಡೆ ಕೇಸ್​ಗೆ ಸಂಬಂಧಿಸಿದಂತೆ, ನಿನ್ನೆ ಐವರನ್ನ ಬಂಧಿಸಿದ್ದ ಮಹಾರಾಷ್ಟ್ರ ಎಸ್​ಐಟಿ ಅಧಿಕಾರಿಗಳು, ಇಂದು ಮತ್ತೊಬ್ಬನನ್ನ ಬಂಧಿಸಿದ್ದಾರೆ. ಜನವರಿ 23 ರಂದೇ ನಾಲ್ವರನ್ನ ಬಂಧಿಸಲಾಗಿತ್ತು. ಮಚೀಂದ್ರಾ ಮಾದವಿಯನ್ನ ವಿಚಾರಣೆ ನಡೆಸಿದ್ದಾರೆ.

ಹಣ ಯಾರಿಗೆ ಸೇರಿದ್ದು?
ಕಂಟೈನರ್ ಹೈಜಾಕ್ ಪ್ರಕರಣ ನಡೆದ ಕೆಲ ದಿನಗಳ ಬಳಿಕ, ನಾಸಿಕ್ ಮೂಲದ ಸಂದೀಪ್ ಪಾಟೀಲ ಎಂಬಾತನನ್ನು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಕಿಶೋರ್ ಸೇಠ್ ಸಹಚರರು ಗನ್ ಪಾಯಿಂಟ್‌ನಲ್ಲಿ ಅಪಹರಿಸಿದ್ದರು. ನಂತರ ಸಂದೀಪ್‌ನನ್ನು ಸುಮಾರು ಒಂದೂವರೆ ತಿಂಗಳ ಕಾಲ ಅಕ್ರಮ ಬಂಧನದಲ್ಲಿಟ್ಟು, ಕಂಟೈನರ್ ಹೈಜಾಕ್‌ಗೆ ನೀನೇ ಕಾರಣ ಎಂದು ಚಿತ್ರಹಿಂಸೆ ಕೊಟ್ಟಿದ್ದರು.

ಅಷ್ಟೆ ಅಲ್ಲ 400 ಕೋಟಿ ಹಣ ಕೊಡದಿದ್ದರೆ ಜೀವ ಉಳಿಯೋದಿಲ್ಲ ಎಂದು ಬೆದರಿಕೆ ಹಾಕಿ, ಮಾನಸಿಕ ಹಾಗೂ ದೈಹಿಕ ಚಿತ್ರಹಿಂಸೆ ನೀಡಿದ್ದರು. ನಂತರ ಅಪಹರಣಕಾರರಿಂದ ತಪ್ಪಿಸಿಕೊಂಡ ಸಂದೀಪ್ ಪಾಟೀಲ, ಮಹಾರಾಷ್ಟ್ರದ ನಾಸಿಕ್ ಪೊಲೀಸ್ ಠಾಣೆಗೆ ತೆರಳಿ ಜ.1ರಂದು ದೂರು ನೀಡಿದ್ದಾರೆ. ಈ ದೂರಿನಲ್ಲಿ 400 ಕೋಟಿ ರೂ.ನಗದು ಸಾಗಿಸುತ್ತಿದ್ದ ವಾಹನ ಅಪಹರಣದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

6 hours ago