ದೇಶ- ವಿದೇಶ

ಭಾರತದಲ್ಲಿ ಎಚ್‌ಎಂಪಿವಿ ವೈರಸ್‌ ಸೋಂಕು ಪತ್ತೆಯಾಗಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಎಚ್‌ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಭಾರತದಲ್ಲೂ ಉಸಿರಾಟದ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್‌ ಗೋಯಲ್‌ ಅವರು, ಎಚ್‌ಎಂಪಿವಿ ವೈರಸ್‌ ಶೀತದಂತಹ ಲಕ್ಷಣಗಳನ್ನು ಹೊಂದಿದೆ. ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ದೇಶದಲ್ಲಿ 2024ರ ಡಿಸೆಂಬರ್‌ನಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಆದರೆ ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ. ಒಂದು ವೇಳೆ ಸಮಸ್ಯೆ ಉದ್ಬವಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಹೇಳಿದರು.

ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಲು ಸಹ ಅವರು ಸಲಹೆ ನೀಡಿದರು.

ಉಸಿರಾಟ ಸಂಬಂಧಿತ ಸಾಂಕ್ರಾಮಿಕ ರೋಗಗಳು ಮಕ್ಕಳು ಹಾಗೂ ಹಿರಿಯರಲ್ಲಿ ಅತೀ ಬೇಗನೆ ಕಾಣಿಸಿಕೊಳ್ಳುತ್ತವೆ. ಚಳಿಗಾಗವಾದ್ದರಿಂದ ಚೀನಾದಲ್ಲಿ ಕೆಲ ವೈರಸ್‌ಗಳು ಆತಂಕ ಸೃಷ್ಟಿಸುವುದು ಸಾಮಾನ್ಯವಾಗಿದೆ. ಆದರೆ ಇದರಿಂದ ಭಾರತಕ್ಕೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತದಲ್ಲಿ ಇದುವರೆಗೂ ಈ ವೈರಸ್‌ ಪತ್ತೆಯಾಗಿಲ್ಲ. ಭಾರತದ ಆರೋಗ್ಯ ವಿಭಾಗ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಹೀಗಾಗಿ ಯಾರೂ ಕೂಡ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago