ನವದೆಹಲಿ: ಜಗತ್ತಿಗೆ ಕೋವಿಡ್-19 ಎನ್ನುವ ವೈರಸ್ ಕೊಟ್ಟು ಜಗತ್ತನ್ನೇ ಕಷ್ಟಕ್ಕೆ ಸಿಲುಕುವಂತೆ ಮಾಡಿದ್ದ ಚೀನಾದಲ್ಲಿ ಇದೀಗ ಹೊಸ ವೈರಸ್ ಕಾಣಿಸಿಕೊಂಡಿದ್ದು, ಚೀನಾದಲ್ಲಿ ತುರ್ತು ಸ್ಥಿತಿ ಉಂಟಾಗುವಂತೆ ಮಾಡಿದೆ. ಚೀನಾದ ಪರಿಸ್ಥಿತಿ ನೋಡಿ ಇತರೆ ದೇಶಗಳು ಕೂಡ ಆತಂಕಗೊಂಡಿವೆ. ಚೀನಾದಲ್ಲಿ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಭಾರತದಲ್ಲಿ ಕೂಡ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.
ಚೀನಾದಲ್ಲಿ ಎಚ್ಎಂಪಿವಿ ಹರಡುತ್ತಿದ್ದು ಭಾರತೀಯರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ನಿಭಾಯಿಸಲು ನಾವು ಸಿದ್ದವಾಗಿದ್ದೇವೆ, ಚೀನಾದಲ್ಲಿ ಇರುವ ಪರಿಸ್ಥಿತಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದೆ.
ಕಳೆದ ಕೆಲವು ವಾರಗಳಲ್ಲಿ ಚೀನಾದಲ್ಲಿ ಉಸಿರಾಟದ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ದೆಹಲಿಯಲ್ಲಿ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.
ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಚೀನಾದಲ್ಲಿ ಈಗ ಇರುವ ಪರಿಸ್ಥಿತಿ ವಿಶೇಷವೇನಲ್ಲ. ಈ ಕಾಲದಲ್ಲಿ ಅಲ್ಲಿ ಉಸಿರಾಟ, ಆರೋಗ್ಯ ಸಮಸ್ಯೆ ಸಾಮಾನ್ಯ ಎನ್ನುವ ಅಭಿಪ್ರಾಯಕ್ಕೆ ಬರಲಾಗಿದೆ. ಇನ್ಪ್ಲುಯೆನ್ಸ್ ವೈರಸ್, ಆರ್ಎಸ್ವಿ, ಎಚ್ಎಂಪಿವಿ ವೈರಸ್ಗಳು ಸಾಮಾನ್ಯ ಎಂದು ತಿಳಿಸಿದೆ.
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…