ದೇಶ- ವಿದೇಶ

ಹನಿಟ್ರ್ಯಾಪ್‌ ಪ್ರಕರಣ : ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ಕರ್ನಾಟಕದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಒಟ್ಟು 48 ಮಂದಿ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣವನ್ನು ಸಿಬಿಐ ಇಲ್ಲವೇ ನ್ಯಾಯಾಂಗದ ತನಿಖೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಇದೇ ವೇಳೆ ಅರ್ಜಿದಾರರ ವಿರುದ್ಧವೂ ಕೆಂಡ ಕಾರಿರುವ ನ್ಯಾಯಾಲಯ ನಿಮಗೆ ಮಾಡಲು ಕೆಲಸವಿಲ್ಲ ಎಂದರೆ ನಮ್ಮ ಅಮೂಲ್ಯವಾದ ಸಮಯವನ್ನು ಏಕೆ ವ್ಯರ್ಥ ಮಾಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದೆ.

ಮಾಧ್ಯಮಗಳ ವರದಿ ಆಧರಿಸಿ ಜಾರ್ಖಂಡ್ ಮೂಲದ ನಿವಾಸಿ ವಿನಯಕುಮಾರ್ ಸಿಂಗ್ ಪರವಾಗಿ ವಕೀಲ ವಿನಯ್‍ಕುಮಾರ್ ಅವರು ಸುಪ್ರೀಂಕೋರ್ಟ್‍ನಲ್ಲಿ ಪಿಐಎಲ್ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಪಿಐಎಲ್‍ಅನ್ನು ವಜಾಗೊಳಿಸಿ ಅರ್ಜಿದಾರರನ್ನು ಕಠಿಣ ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡರು.

ಅರ್ಜಿದಾರರು ಮೂಲತಃ ಜಾರ್ಖಂಡ್‍ನವರು. ನಿಮಗೂ ಈ ಪ್ರಕರಣಕ್ಕೂ ಏನು ಸಂಬಂಧ? ಒಂದು ವೇಳೆ ಹನಿಟ್ರ್ಯಾಪ್‌ ಗೆ ಒಳಗಾಗಿದ್ದರೆ ಕರ್ನಾಟಕದವರು ಅರ್ಜಿ ಹಾಕಲಿ. ಮುಂದೆ ನಾವೇ ನೋಡಿಕೊಳ್ಳುತ್ತೇವೆ. ನಿಮಗೆ ಕೆಲಸ ಇಲ್ಲ ಎಂದರೆ ಬೇರೆ ಯಾವುದಾದರೂ ಕೆಲಸ ಮಾಡಿ. ಸುಖಾಸುಮ್ಮನೆ ನ್ಯಾಯಾಲಯದ ಸಮಯವನ್ನು ಹಾಳು ಮಾಡಬೇಡಿ ಎಂದು ಎಚ್ಚರಿಕೆ ಕೊಟ್ಟಿತು.

ಒಂದು ವೇಳೆ ನ್ಯಾಯಾಧೀಶರು ಹನಿಟ್ರ್ಯಾಪ್‌ ಗೆ ಒಳಗಾಗಿದ್ದರೆ ಅವರು ನೋಡಿಕೊಳ್ಳುತ್ತಾರೆ. ಇದಕ್ಕೆ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ? ರಾಜಕೀಯದ ನಾನ್ಸೆನ್?ಸ ವಿಚಾರಗಳನ್ನು ವಿಚಾರಣೆ ಮಾಡಲು ನಮಗೆ ಸಮಯವಿಲ್ಲ. ಮತ್ತೊಮ್ಮೆ ಇಂಥ ಅರ್ಥವಿಲ್ಲದ ಪಿಐಎಲ್ ಹಾಕಬೇಡಿ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಕಟು ಶಬ್ದಗಳಲ್ಲಿ ಟೀಕೆ ಮಾಡಿತು.

ಹನಿಟ್ರ್ಯಾಪ್‌ ಒಳಗಾಗದವರೇ ಸುಮನಿರುವಾಗ ನೀವೇಕೆ? ಆಸಕ್ತಿ ವಹಿಸಿದ್ದೀರಿ? ಒಂದು ವೇಳೆ ನಿಮ ಪ್ರಕಾರ ಈ ಪ್ರಕರಣದಲ್ಲಿ ನ್ಯಾಯಾಧೀಶರು ಇದ್ದರೆ ಅದನ್ನು ಅವರು ಸರಿಪಡಿಸುತ್ತಾರೆ. ನೀವು ನಿಮ ಕೆಲಸ ನೋಡಿಕೊಳ್ಳಿ. ಇಲ್ಲದ ವಿಷಯವನ್ನು ತಲೆಗೆ ಬಿಟ್ಟುಕೊಡಬೇಡಿ. ಮೊದಲು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಮಹತ್ವವನ್ನು ತಿಳಿದುಕೊಳ್ಳಿ ಎಂದು ಸಲಹೆ ಮಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

33 mins ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

42 mins ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

1 hour ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

1 hour ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

2 hours ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

2 hours ago