ದೇಶ- ವಿದೇಶ

ಹನಿಟ್ರ್ಯಾಪ್‌ ಪ್ರಕರಣ : ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ಕರ್ನಾಟಕದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಒಟ್ಟು 48 ಮಂದಿ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣವನ್ನು ಸಿಬಿಐ ಇಲ್ಲವೇ ನ್ಯಾಯಾಂಗದ ತನಿಖೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಇದೇ ವೇಳೆ ಅರ್ಜಿದಾರರ ವಿರುದ್ಧವೂ ಕೆಂಡ ಕಾರಿರುವ ನ್ಯಾಯಾಲಯ ನಿಮಗೆ ಮಾಡಲು ಕೆಲಸವಿಲ್ಲ ಎಂದರೆ ನಮ್ಮ ಅಮೂಲ್ಯವಾದ ಸಮಯವನ್ನು ಏಕೆ ವ್ಯರ್ಥ ಮಾಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದೆ.

ಮಾಧ್ಯಮಗಳ ವರದಿ ಆಧರಿಸಿ ಜಾರ್ಖಂಡ್ ಮೂಲದ ನಿವಾಸಿ ವಿನಯಕುಮಾರ್ ಸಿಂಗ್ ಪರವಾಗಿ ವಕೀಲ ವಿನಯ್‍ಕುಮಾರ್ ಅವರು ಸುಪ್ರೀಂಕೋರ್ಟ್‍ನಲ್ಲಿ ಪಿಐಎಲ್ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಪಿಐಎಲ್‍ಅನ್ನು ವಜಾಗೊಳಿಸಿ ಅರ್ಜಿದಾರರನ್ನು ಕಠಿಣ ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡರು.

ಅರ್ಜಿದಾರರು ಮೂಲತಃ ಜಾರ್ಖಂಡ್‍ನವರು. ನಿಮಗೂ ಈ ಪ್ರಕರಣಕ್ಕೂ ಏನು ಸಂಬಂಧ? ಒಂದು ವೇಳೆ ಹನಿಟ್ರ್ಯಾಪ್‌ ಗೆ ಒಳಗಾಗಿದ್ದರೆ ಕರ್ನಾಟಕದವರು ಅರ್ಜಿ ಹಾಕಲಿ. ಮುಂದೆ ನಾವೇ ನೋಡಿಕೊಳ್ಳುತ್ತೇವೆ. ನಿಮಗೆ ಕೆಲಸ ಇಲ್ಲ ಎಂದರೆ ಬೇರೆ ಯಾವುದಾದರೂ ಕೆಲಸ ಮಾಡಿ. ಸುಖಾಸುಮ್ಮನೆ ನ್ಯಾಯಾಲಯದ ಸಮಯವನ್ನು ಹಾಳು ಮಾಡಬೇಡಿ ಎಂದು ಎಚ್ಚರಿಕೆ ಕೊಟ್ಟಿತು.

ಒಂದು ವೇಳೆ ನ್ಯಾಯಾಧೀಶರು ಹನಿಟ್ರ್ಯಾಪ್‌ ಗೆ ಒಳಗಾಗಿದ್ದರೆ ಅವರು ನೋಡಿಕೊಳ್ಳುತ್ತಾರೆ. ಇದಕ್ಕೆ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ? ರಾಜಕೀಯದ ನಾನ್ಸೆನ್?ಸ ವಿಚಾರಗಳನ್ನು ವಿಚಾರಣೆ ಮಾಡಲು ನಮಗೆ ಸಮಯವಿಲ್ಲ. ಮತ್ತೊಮ್ಮೆ ಇಂಥ ಅರ್ಥವಿಲ್ಲದ ಪಿಐಎಲ್ ಹಾಕಬೇಡಿ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಕಟು ಶಬ್ದಗಳಲ್ಲಿ ಟೀಕೆ ಮಾಡಿತು.

ಹನಿಟ್ರ್ಯಾಪ್‌ ಒಳಗಾಗದವರೇ ಸುಮನಿರುವಾಗ ನೀವೇಕೆ? ಆಸಕ್ತಿ ವಹಿಸಿದ್ದೀರಿ? ಒಂದು ವೇಳೆ ನಿಮ ಪ್ರಕಾರ ಈ ಪ್ರಕರಣದಲ್ಲಿ ನ್ಯಾಯಾಧೀಶರು ಇದ್ದರೆ ಅದನ್ನು ಅವರು ಸರಿಪಡಿಸುತ್ತಾರೆ. ನೀವು ನಿಮ ಕೆಲಸ ನೋಡಿಕೊಳ್ಳಿ. ಇಲ್ಲದ ವಿಷಯವನ್ನು ತಲೆಗೆ ಬಿಟ್ಟುಕೊಡಬೇಡಿ. ಮೊದಲು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಮಹತ್ವವನ್ನು ತಿಳಿದುಕೊಳ್ಳಿ ಎಂದು ಸಲಹೆ ಮಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

12 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

18 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago