ದೇಶ- ವಿದೇಶ

ಹನಿಟ್ರ್ಯಾಪ್‌ ಪ್ರಕರಣ : ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ಕರ್ನಾಟಕದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಒಟ್ಟು 48 ಮಂದಿ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣವನ್ನು ಸಿಬಿಐ ಇಲ್ಲವೇ ನ್ಯಾಯಾಂಗದ ತನಿಖೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಇದೇ ವೇಳೆ ಅರ್ಜಿದಾರರ ವಿರುದ್ಧವೂ ಕೆಂಡ ಕಾರಿರುವ ನ್ಯಾಯಾಲಯ ನಿಮಗೆ ಮಾಡಲು ಕೆಲಸವಿಲ್ಲ ಎಂದರೆ ನಮ್ಮ ಅಮೂಲ್ಯವಾದ ಸಮಯವನ್ನು ಏಕೆ ವ್ಯರ್ಥ ಮಾಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದೆ.

ಮಾಧ್ಯಮಗಳ ವರದಿ ಆಧರಿಸಿ ಜಾರ್ಖಂಡ್ ಮೂಲದ ನಿವಾಸಿ ವಿನಯಕುಮಾರ್ ಸಿಂಗ್ ಪರವಾಗಿ ವಕೀಲ ವಿನಯ್‍ಕುಮಾರ್ ಅವರು ಸುಪ್ರೀಂಕೋರ್ಟ್‍ನಲ್ಲಿ ಪಿಐಎಲ್ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಪಿಐಎಲ್‍ಅನ್ನು ವಜಾಗೊಳಿಸಿ ಅರ್ಜಿದಾರರನ್ನು ಕಠಿಣ ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡರು.

ಅರ್ಜಿದಾರರು ಮೂಲತಃ ಜಾರ್ಖಂಡ್‍ನವರು. ನಿಮಗೂ ಈ ಪ್ರಕರಣಕ್ಕೂ ಏನು ಸಂಬಂಧ? ಒಂದು ವೇಳೆ ಹನಿಟ್ರ್ಯಾಪ್‌ ಗೆ ಒಳಗಾಗಿದ್ದರೆ ಕರ್ನಾಟಕದವರು ಅರ್ಜಿ ಹಾಕಲಿ. ಮುಂದೆ ನಾವೇ ನೋಡಿಕೊಳ್ಳುತ್ತೇವೆ. ನಿಮಗೆ ಕೆಲಸ ಇಲ್ಲ ಎಂದರೆ ಬೇರೆ ಯಾವುದಾದರೂ ಕೆಲಸ ಮಾಡಿ. ಸುಖಾಸುಮ್ಮನೆ ನ್ಯಾಯಾಲಯದ ಸಮಯವನ್ನು ಹಾಳು ಮಾಡಬೇಡಿ ಎಂದು ಎಚ್ಚರಿಕೆ ಕೊಟ್ಟಿತು.

ಒಂದು ವೇಳೆ ನ್ಯಾಯಾಧೀಶರು ಹನಿಟ್ರ್ಯಾಪ್‌ ಗೆ ಒಳಗಾಗಿದ್ದರೆ ಅವರು ನೋಡಿಕೊಳ್ಳುತ್ತಾರೆ. ಇದಕ್ಕೆ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ? ರಾಜಕೀಯದ ನಾನ್ಸೆನ್?ಸ ವಿಚಾರಗಳನ್ನು ವಿಚಾರಣೆ ಮಾಡಲು ನಮಗೆ ಸಮಯವಿಲ್ಲ. ಮತ್ತೊಮ್ಮೆ ಇಂಥ ಅರ್ಥವಿಲ್ಲದ ಪಿಐಎಲ್ ಹಾಕಬೇಡಿ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಕಟು ಶಬ್ದಗಳಲ್ಲಿ ಟೀಕೆ ಮಾಡಿತು.

ಹನಿಟ್ರ್ಯಾಪ್‌ ಒಳಗಾಗದವರೇ ಸುಮನಿರುವಾಗ ನೀವೇಕೆ? ಆಸಕ್ತಿ ವಹಿಸಿದ್ದೀರಿ? ಒಂದು ವೇಳೆ ನಿಮ ಪ್ರಕಾರ ಈ ಪ್ರಕರಣದಲ್ಲಿ ನ್ಯಾಯಾಧೀಶರು ಇದ್ದರೆ ಅದನ್ನು ಅವರು ಸರಿಪಡಿಸುತ್ತಾರೆ. ನೀವು ನಿಮ ಕೆಲಸ ನೋಡಿಕೊಳ್ಳಿ. ಇಲ್ಲದ ವಿಷಯವನ್ನು ತಲೆಗೆ ಬಿಟ್ಟುಕೊಡಬೇಡಿ. ಮೊದಲು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಮಹತ್ವವನ್ನು ತಿಳಿದುಕೊಳ್ಳಿ ಎಂದು ಸಲಹೆ ಮಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

2 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

2 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

3 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

4 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

4 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

4 hours ago