ದೇಶ- ವಿದೇಶ

ಹನಿಟ್ರ್ಯಾಪ್‌ ಪ್ರಕರಣ : ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ಕರ್ನಾಟಕದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಒಟ್ಟು 48 ಮಂದಿ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣವನ್ನು ಸಿಬಿಐ ಇಲ್ಲವೇ ನ್ಯಾಯಾಂಗದ ತನಿಖೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಇದೇ ವೇಳೆ ಅರ್ಜಿದಾರರ ವಿರುದ್ಧವೂ ಕೆಂಡ ಕಾರಿರುವ ನ್ಯಾಯಾಲಯ ನಿಮಗೆ ಮಾಡಲು ಕೆಲಸವಿಲ್ಲ ಎಂದರೆ ನಮ್ಮ ಅಮೂಲ್ಯವಾದ ಸಮಯವನ್ನು ಏಕೆ ವ್ಯರ್ಥ ಮಾಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದೆ.

ಮಾಧ್ಯಮಗಳ ವರದಿ ಆಧರಿಸಿ ಜಾರ್ಖಂಡ್ ಮೂಲದ ನಿವಾಸಿ ವಿನಯಕುಮಾರ್ ಸಿಂಗ್ ಪರವಾಗಿ ವಕೀಲ ವಿನಯ್‍ಕುಮಾರ್ ಅವರು ಸುಪ್ರೀಂಕೋರ್ಟ್‍ನಲ್ಲಿ ಪಿಐಎಲ್ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಪಿಐಎಲ್‍ಅನ್ನು ವಜಾಗೊಳಿಸಿ ಅರ್ಜಿದಾರರನ್ನು ಕಠಿಣ ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡರು.

ಅರ್ಜಿದಾರರು ಮೂಲತಃ ಜಾರ್ಖಂಡ್‍ನವರು. ನಿಮಗೂ ಈ ಪ್ರಕರಣಕ್ಕೂ ಏನು ಸಂಬಂಧ? ಒಂದು ವೇಳೆ ಹನಿಟ್ರ್ಯಾಪ್‌ ಗೆ ಒಳಗಾಗಿದ್ದರೆ ಕರ್ನಾಟಕದವರು ಅರ್ಜಿ ಹಾಕಲಿ. ಮುಂದೆ ನಾವೇ ನೋಡಿಕೊಳ್ಳುತ್ತೇವೆ. ನಿಮಗೆ ಕೆಲಸ ಇಲ್ಲ ಎಂದರೆ ಬೇರೆ ಯಾವುದಾದರೂ ಕೆಲಸ ಮಾಡಿ. ಸುಖಾಸುಮ್ಮನೆ ನ್ಯಾಯಾಲಯದ ಸಮಯವನ್ನು ಹಾಳು ಮಾಡಬೇಡಿ ಎಂದು ಎಚ್ಚರಿಕೆ ಕೊಟ್ಟಿತು.

ಒಂದು ವೇಳೆ ನ್ಯಾಯಾಧೀಶರು ಹನಿಟ್ರ್ಯಾಪ್‌ ಗೆ ಒಳಗಾಗಿದ್ದರೆ ಅವರು ನೋಡಿಕೊಳ್ಳುತ್ತಾರೆ. ಇದಕ್ಕೆ ನೀವೇಕೆ ತಲೆ ಕೆಡಿಸಿಕೊಳ್ಳುತ್ತೀರಿ? ರಾಜಕೀಯದ ನಾನ್ಸೆನ್?ಸ ವಿಚಾರಗಳನ್ನು ವಿಚಾರಣೆ ಮಾಡಲು ನಮಗೆ ಸಮಯವಿಲ್ಲ. ಮತ್ತೊಮ್ಮೆ ಇಂಥ ಅರ್ಥವಿಲ್ಲದ ಪಿಐಎಲ್ ಹಾಕಬೇಡಿ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಕಟು ಶಬ್ದಗಳಲ್ಲಿ ಟೀಕೆ ಮಾಡಿತು.

ಹನಿಟ್ರ್ಯಾಪ್‌ ಒಳಗಾಗದವರೇ ಸುಮನಿರುವಾಗ ನೀವೇಕೆ? ಆಸಕ್ತಿ ವಹಿಸಿದ್ದೀರಿ? ಒಂದು ವೇಳೆ ನಿಮ ಪ್ರಕಾರ ಈ ಪ್ರಕರಣದಲ್ಲಿ ನ್ಯಾಯಾಧೀಶರು ಇದ್ದರೆ ಅದನ್ನು ಅವರು ಸರಿಪಡಿಸುತ್ತಾರೆ. ನೀವು ನಿಮ ಕೆಲಸ ನೋಡಿಕೊಳ್ಳಿ. ಇಲ್ಲದ ವಿಷಯವನ್ನು ತಲೆಗೆ ಬಿಟ್ಟುಕೊಡಬೇಡಿ. ಮೊದಲು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಮಹತ್ವವನ್ನು ತಿಳಿದುಕೊಳ್ಳಿ ಎಂದು ಸಲಹೆ ಮಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

38 seconds ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago