ನವದೆಹಲಿ: ರಾಜ್ಯದಾದ್ಯಾಂತ ಸುದ್ದಿಯಲ್ಲಿರುವ ಹನಿಟ್ರ್ಯಾಪ್ ಪ್ರಕರಣವು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಕರ್ನಾಟಕದಲ್ಲಿ ಸಚಿವರು, ಶಾಸಕರ ವಿರುದ್ಧ ಹನಿಟ್ರ್ಯಾಪ್ ನಡೆದಿದೆ ಎನ್ನಲಾದ ಪ್ರಕರಣ ಕುರಿತು ತನಿಖೆ ನಡೆಸುವಂತೆ ವಿನಯ್ಕುಮಾರ್ ಸಿಂಗ್ ಎಂಬುವವರು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ (ಪಿಐಎಲ್) ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ವಿಧಾನಸಭೆ ಅಧಿವೇಶನದ ವೇಳೆ ಸ್ವತಃ ಸಚಿವರೇ ತಮ್ಮ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಹೇಳಿದ್ದಾರೆ. ಸಾರ್ವಜನಿಕ ವಿಶ್ವಾಸದ ದೃಷ್ಠಿಯಿಂದ ಕೋರ್ಟ್ ನಿಗಾದಲ್ಲಿ ಕೂಡಲೇ ತನಿಖೆ ನಡೆಸಬೇಕು ಎಂದು ವಿನಯ್ಕುಮಾರ್ ಸಿಂಗ್ ಮುಖ್ಯ ನಾಯಾಮೂರ್ತಿ ಬಳಿ ಮನವಿ ಮಾಡಿದ್ದಾರೆ.
ಇದಕ್ಕೆ ಶೀಘ್ರವೇ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದ್ದು, ಹನಿಟ್ರ್ಯಾಪ್ ವಿಚಾರಣೆಯನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…