ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ ಸೋಮವಾರ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯ ಯಾವುದೇ ಬಂದರುಗಳ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ ಮಾಡುವುದಾಗಿ ಪ್ರತಿಜ್ಞೆ ಮಾಡಿದೆ.
ತನ್ನ ಬಂದರುಗಳ ಮೇಲೆ ದಿಗ್ಬಂಧನ ಹೇರುವ ಅಮೆರಿಕದ ಬೆದರಿಕೆಯನ್ನು ಇರಾನ್ ಸೋಮವಾರ ಕಟುವಾಗಿ ಟೀಕಿಸಿದೆ, ಒಂದು ವೇಳೆ ದಿಗ್ಬಂಧನ ವಿಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಪರ್ಷಿಯನ್ ಕೊಲ್ಲಿ ಪ್ರದೇಶದಾದ್ಯಂತ ಸಮುದ್ರ ಭದ್ರತೆಗೆ ಗಂಭೀರ ಅಪಾಯವಿದೆ ಎಂದು ಎಚ್ಚರಿಸಿದೆ.
ಅಮೆರಿಕದ ಕ್ರಮಗಳನ್ನು ಕಾನೂನುಬಾಹಿರ ಎಂದು ಟೀಕಿಸಿದ ಇರಾನ್, ಅಂತರರಾಷ್ಟ್ರೀಯ ನೀರಿನಲ್ಲಿ ಹಡಗುಗಳ ಚಲನೆಯ ಮೇಲಿನ ನಿರ್ಬಂಧಗಳು ‘ಕಡಲ್ಗಳ್ಳತನ‘ಕ್ಕೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಮಾನದಂಡಗಳನ್ನು ಉಲ್ಲಂಘಿಸುತ್ತದೆ ಎಂದು ವಕ್ತಾರರು ಹೇಳಿದ್ದಾರೆ. ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಸಮುದ್ರದಲ್ಲಿನ ಸಮುದ್ರ ಭದ್ರತೆಯನ್ನು ಸಾಮೂಹಿಕವಾಗಿ ಎತ್ತಿಹಿಡಿಯಬೇಕು, ಇಸ್ಲಾಮಿಕ್ ಗಣರಾಜ್ಯದ ಸಶಸ್ತ್ರ ಪಡೆಗಳು ತನ್ನ ಪ್ರಾದೇಶಿಕ ನೀರಿನಲ್ಲಿ ದೇಶದ ಹಕ್ಕುಗಳು ಮತ್ತು ಸಾರ್ವಭೌಮತ್ವವನ್ನು ಕಾಪಾಡುವುದನ್ನು ‘ನೈಸರ್ಗಿಕ ಮತ್ತು ಕಾನೂನುಬದ್ಧ ಕರ್ತವ್ಯ‘ ಎಂದು ಪರಿಗಣಿಸುತ್ತವೆ ಎಂದು ಎಂದು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್ಕಾಸ್ಟಿಂಗ್ ಸೋಮವಾರ ವರದಿ ಮಾಡಿದೆ.
‘ಈ ಪ್ರದೇಶದ ಯಾವುದೇ ಬಂದರು ಸುರಕ್ಷಿತವಾಗಿರುವುದಿಲ್ಲ‘ ಎಂದು ಇರಾನಿನ ಮಿಲಿಟರಿ ಮತ್ತು ಕ್ರಾಂತಿಕಾರಿ ಗಾರ್ಡ್ ಪ್ರಕಟಣೆಯಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.
ಇರಾನ್ ತನ್ನ ನೀರಿನಲ್ಲಿ ಭದ್ರತೆ ಜಾರಿಗೊಳಿಸುವುದನ್ನು ಮುಂದುವರಿಸುತ್ತದೆ ಮತ್ತು ವೈರಿ ದೇಶಗಳಿಗೆ ಸಂಬಂಧಿಸಿದ ಹಡಗುಗಳನ್ನು ಆಯಕಟ್ಟಿನ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿಸಲಾಗುವುದಿಲ್ಲ ಎಂದು ಒತ್ತಿಹೇಳಲಾಗಿದೆ. ಆದರೆ ಇತರ ಹಡಗುಗಳಿಗೆ ಇರಾನಿನ ಅಧಿಕಾರಿಗಳು ನಿಗದಿಪಡಿಸಿದ ನಿಯಮಗಳಿಗೆ ಅನುಸಾರವಾಗಿ ಸಾಗಣೆಗೆ ಅವಕಾಶ ನೀಡಲಾಗುವುದು ಎಂದು ಪುನರುಚ್ಚರಿಸಿದೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…