ದೇಶ- ವಿದೇಶ

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ, ಇರಾನ್ ಸೋಮವಾರ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಕೊಲ್ಲಿಯ ಯಾವುದೇ ಬಂದರುಗಳ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ ಮಾಡುವುದಾಗಿ ಪ್ರತಿಜ್ಞೆ ಮಾಡಿದೆ.

ತನ್ನ ಬಂದರುಗಳ ಮೇಲೆ ದಿಗ್ಬಂಧನ ಹೇರುವ ಅಮೆರಿಕದ ಬೆದರಿಕೆಯನ್ನು ಇರಾನ್ ಸೋಮವಾರ ಕಟುವಾಗಿ ಟೀಕಿಸಿದೆ, ಒಂದು ವೇಳೆ ದಿಗ್ಬಂಧನ ವಿಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಪರ್ಷಿಯನ್ ಕೊಲ್ಲಿ ಪ್ರದೇಶದಾದ್ಯಂತ ಸಮುದ್ರ ಭದ್ರತೆಗೆ ಗಂಭೀರ ಅಪಾಯವಿದೆ ಎಂದು ಎಚ್ಚರಿಸಿದೆ.

ಅಮೆರಿಕದ ಕ್ರಮಗಳನ್ನು ಕಾನೂನುಬಾಹಿರ ಎಂದು ಟೀಕಿಸಿದ ಇರಾನ್, ಅಂತರರಾಷ್ಟ್ರೀಯ ನೀರಿನಲ್ಲಿ ಹಡಗುಗಳ ಚಲನೆಯ ಮೇಲಿನ ನಿರ್ಬಂಧಗಳು ‘ಕಡಲ್ಗಳ್ಳತನ‘ಕ್ಕೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಮಾನದಂಡಗಳನ್ನು ಉಲ್ಲಂಘಿಸುತ್ತದೆ ಎಂದು ವಕ್ತಾರರು ಹೇಳಿದ್ದಾರೆ. ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಸಮುದ್ರದಲ್ಲಿನ ಸಮುದ್ರ ಭದ್ರತೆಯನ್ನು ಸಾಮೂಹಿಕವಾಗಿ ಎತ್ತಿಹಿಡಿಯಬೇಕು, ಇಸ್ಲಾಮಿಕ್ ಗಣರಾಜ್ಯದ ಸಶಸ್ತ್ರ ಪಡೆಗಳು ತನ್ನ ಪ್ರಾದೇಶಿಕ ನೀರಿನಲ್ಲಿ ದೇಶದ ಹಕ್ಕುಗಳು ಮತ್ತು ಸಾರ್ವಭೌಮತ್ವವನ್ನು ಕಾಪಾಡುವುದನ್ನು ‘ನೈಸರ್ಗಿಕ ಮತ್ತು ಕಾನೂನುಬದ್ಧ ಕರ್ತವ್ಯ‘ ಎಂದು ಪರಿಗಣಿಸುತ್ತವೆ ಎಂದು ಎಂದು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್‌ಕಾಸ್ಟಿಂಗ್ ಸೋಮವಾರ ವರದಿ ಮಾಡಿದೆ.

‘ಈ ಪ್ರದೇಶದ ಯಾವುದೇ ಬಂದರು ಸುರಕ್ಷಿತವಾಗಿರುವುದಿಲ್ಲ‘ ಎಂದು ಇರಾನಿನ ಮಿಲಿಟರಿ ಮತ್ತು ಕ್ರಾಂತಿಕಾರಿ ಗಾರ್ಡ್ ಪ್ರಕಟಣೆಯಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.

ಇರಾನ್ ತನ್ನ ನೀರಿನಲ್ಲಿ ಭದ್ರತೆ ಜಾರಿಗೊಳಿಸುವುದನ್ನು ಮುಂದುವರಿಸುತ್ತದೆ ಮತ್ತು ವೈರಿ ದೇಶಗಳಿಗೆ ಸಂಬಂಧಿಸಿದ ಹಡಗುಗಳನ್ನು ಆಯಕಟ್ಟಿನ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿಸಲಾಗುವುದಿಲ್ಲ ಎಂದು ಒತ್ತಿಹೇಳಲಾಗಿದೆ. ಆದರೆ ಇತರ ಹಡಗುಗಳಿಗೆ ಇರಾನಿನ ಅಧಿಕಾರಿಗಳು ನಿಗದಿಪಡಿಸಿದ ನಿಯಮಗಳಿಗೆ ಅನುಸಾರವಾಗಿ ಸಾಗಣೆಗೆ ಅವಕಾಶ ನೀಡಲಾಗುವುದು ಎಂದು ಪುನರುಚ್ಚರಿಸಿದೆ.

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

58 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

1 hour ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

1 hour ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

1 hour ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago