ಟೆಹ್ರಾನ್ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ.
ಪಾಕಿಸ್ತಾನದ ಸಂಧಾನಕಾರರ ಮೂಲಕ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಇರಾನ್, ಪ್ರಮುಖವಾಗಿ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಂತೆ ಕೋರಿದೆ. ಪ್ರಸ್ತುತ ನಡೆಯುತ್ತಿರುವ ಸಂಘರ್ಷವನ್ನು ತಕ್ಷಣವೇ ಕೊನೆಗೊಳಿಸಲು ಮತ್ತು ವಿಶ್ವದ ಪ್ರಮುಖ ವ್ಯಾಪಾರ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತಾವು ಸಿದ್ಧ ಎಂದು ಇರಾನ್ ತಿಳಿಸಿದೆ.
ಅತ್ಯಂತ ವಿವಾದಾತ್ಮಕವಾಗಿರುವ ಮತ್ತು ಸಂಘರ್ಷದ ಕೇಂದ್ರಬಿಂದುವಾಗಿರುವ ಪರಮಾಣು ಕಾರ್ಯಕ್ರಮದ ಕುರಿತಾದ ಚರ್ಚೆಗಳನ್ನು ಸದ್ಯಕ್ಕೆ ಬದಿಗಿಟ್ಟು, ನಂತರದ ಹಂತದಲ್ಲಿ ಮಾತುಕತೆ ನಡೆಸೋಣ ಎಂಬ ನಿಲುವನ್ನು ಇರಾನ್ ತಳೆದಿದೆ. ಈ ಮೂಲಕ ಸದ್ಯದ ಉದ್ವಿಗ್ನತೆಯನ್ನು ತಣ್ಣಗಾಗಿಸುವುದು ಇರಾನ್ನ ತಂತ್ರವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…