ದೇಶ- ವಿದೇಶ

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ ಹೇಳಿದ್ದಾರೆ.

ಭಾರತ, ಚೀನಾ, ರಷ್ಯಾ, ಇರಾಕ್‌ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರರಾಷ್ಟ್ರಗಳಿಗೆ ಹೊರ್ಮುಜ್‌ ಮೂಲಕ ಸಂಚಾರಕ್ಕೆ ಅನುಮತಿಸಿದ್ದೇವೆ ಎಂದು ಅರಾಘ್ಚಿ ಹೇಳಿರುವುದಾಗಿ ಮುಂಬೈನಲ್ಲಿರುವ ಇರಾನ್‌ ಕಾನ್ಸುಲೇಟ್‌ ಜನರಲ್‌ ಅವರು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.

ಸ್ನೇಹಪರ ರಾಷ್ಟ್ರಗಳ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದೇವೆ. ಹೀಗಾಗಿ, ನಾವು ಹೊರ್ಮುಜ್‌ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಲ್ಲ. ಆದರೆ ಶತ್ರುಗಳಿಗೆ ಮಾತ್ರ ಮುಚ್ಚಿದ್ದೇವೆ ಎಂದು ಅರಘ್ಚಿ ಹೇಳಿದ್ದಾರೆ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್‌ ಅವರು ಜಾಗತಿಕ ಇಂಧನ ಪೂರೈಕೆ ಅಡಚಣೆಗಳ ನಡುವೆ ಹೊರ್ಮುಜ್‌ ಜಲಸಂಧಿಯನ್ನು ಮತ್ತೆ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದರು. ಈ ಒತ್ತಾಯದ ಬೆನ್ನಲ್ಲೇ ಇರಾನ್‌ ಹೇಳಿಕೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago