ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
96 ವರ್ಷ ವಯಸ್ಸಿನ ಅವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದು, ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ದೆಹಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಅಡ್ವಾಣಿ ಅವರನ್ನು ಆಸ್ಪತ್ರೆಯೆ ಡಾ.ವಿನೀಶ್ ಸೂರಿ ಎಂಬುವವರು ಆರೈಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಡ್ವಾಣಿ ಅವರು ಬಿಜೆಪಿ ಪಕ್ಷವನ್ನು ಕಟ್ಟಿದ್ದಲ್ಲದೇ ಆ ಪಕ್ಷವನ್ನು ಗಟ್ಟಿಗೊಳಿಸಿದವರಲ್ಲಿ ಬಹಳ ಹಿರಿಯರು. ಈ ಎಲ್ಲಾ ಸಾಧನೆಗಳಿಂದ ಅವರಿಗೆ ಭಾರತ ರತ್ನ ಪ್ರಶಸ್ತಿ ಕೂಡ ಲಭಿಸಿದೆ. ಅಡ್ವಾಣಿ ಜೊತೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕೂಡ ಬಿಜೆಪಿಯನ್ನು ಪ್ರಬಲ ರಾಷ್ಟ್ರೀಯ ಪಕ್ಷವನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇನ್ನು ಅಯೋಧ್ಯೆ ರಾಮಮಂದಿರಕ್ಕಾಗಿ ಚಳುವಳಿಯ ನೇತೃತ್ವ ವಹಿಸಿದವರಲ್ಲಿ ಅಡ್ವಾಣಿ ಮೊದಲಿಗರಾಗಿದ್ದು, ರಾಮಮಂದಿರ ನಿರ್ಮಿಸಲು ಅವರ ಪಾತ್ರ ಬಹಳ ಪ್ರಮುಖವಾಗಿದೆ.
ಈಗ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ಬಿಜೆಪಿ ನಾಯಕರು ಭೇಟಿ ನೀಡಿ ಅಡ್ವಾಣಿ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…