ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ಮಕ್ಕಳ ಸಜೀವ ದಹನ

ಉತ್ತರಪ್ರದೇಶ: ಇಲ್ಲಿನ ಝಾನ್ಸಿಯಾ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

ಶುಕ್ರವಾರ ರಾತ್ರಿ 10:45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಆಕ್ಸಿಜನ್‌ ಕಾನ್ಸೆಂಟ್ರೇಟರ್‌ ಒಳಗೆ ಶಾರ್ಟ್‌ ಸರ್ಕ್ಯೂಟ್‌ ಆಗಿ ಬೆಂಕಿ ಸಂಭವಿಸಿದೆ. ಕುರಿತು ತನಿಖೆ ನಡೆಸುವುದಕ್ಕಾಗಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅವಿನಾಶ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಮಕ್ಕಳನ್ನು ಕಾಪಾಡಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳು ಸಹ ಜೀವ ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದರಿಂದ ಆಸ್ಪತ್ರೆಯಲ್ಲಿ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣವಾಗಿತ್ತು. ಈ ವೇಳೆ ಕಿಟಕಿ ಗಾಜುಗಳನ್ನು ಒಡೆದು ರೋಗಿಗಳನ್ನು ಪಾರುಮಾಡಲು ಪ್ರಯತ್ನಿಸಿದರು.

ಜಿಲ್ಲಾಡಳಿತ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಯಿಸಿ, ರಕ್ಷಣಾ ಕಾರ್ಯ ಕೈಗೊಂಡಿದ್ದರು.

ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ಘೋಷಣೆ
ಇನ್ನೂ ಘಟನೆಯಲ್ಲಿ ಸಾವನ್ನಪ್ಪಿದ ಮಕ್ಕಳ ಕುಟುಂಬಗಳಿಗೆ 5ಲಕ್ಷ ಆರ್ಥಿಕ ನೆರವು ಹಾಗೂ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

60 mins ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

1 hour ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

1 hour ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

1 hour ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

4 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

4 hours ago