ಉತ್ತರಪ್ರದೇಶ: ಇಲ್ಲಿನ ಝಾನ್ಸಿಯಾ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.
ಶುಕ್ರವಾರ ರಾತ್ರಿ 10:45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಆಕ್ಸಿಜನ್ ಕಾನ್ಸೆಂಟ್ರೇಟರ್ ಒಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಸಂಭವಿಸಿದೆ. ಕುರಿತು ತನಿಖೆ ನಡೆಸುವುದಕ್ಕಾಗಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವಿನಾಶ್ ಕುಮಾರ್ ತಿಳಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಮಕ್ಕಳನ್ನು ಕಾಪಾಡಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳು ಸಹ ಜೀವ ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದರಿಂದ ಆಸ್ಪತ್ರೆಯಲ್ಲಿ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣವಾಗಿತ್ತು. ಈ ವೇಳೆ ಕಿಟಕಿ ಗಾಜುಗಳನ್ನು ಒಡೆದು ರೋಗಿಗಳನ್ನು ಪಾರುಮಾಡಲು ಪ್ರಯತ್ನಿಸಿದರು.
ಜಿಲ್ಲಾಡಳಿತ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಯಿಸಿ, ರಕ್ಷಣಾ ಕಾರ್ಯ ಕೈಗೊಂಡಿದ್ದರು.
ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ಘೋಷಣೆ
ಇನ್ನೂ ಘಟನೆಯಲ್ಲಿ ಸಾವನ್ನಪ್ಪಿದ ಮಕ್ಕಳ ಕುಟುಂಬಗಳಿಗೆ 5ಲಕ್ಷ ಆರ್ಥಿಕ ನೆರವು ಹಾಗೂ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…