somanna (1)
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. ಇದು ರಾಜ್ಯ ಸರ್ಕಾರ ದಡ್ಡತನದ ಪರಮಾವಧಿ. 2ನೇ ಅವಧಿಗೆ ಸಿಎಂ ಆದ ಬಳಿಕ ಸಿದ್ದರಾಮಯ್ಯ ಬಹಳ ಬದಲಾವಣೆಯಾಗಿದ್ದಾರೆ. ಮೊದಲಿನ ಸಿದ್ದರಾಮಯ್ಯ ಅಲ್ಲ. ಈಗ ಅವರು ತುಂಬಾ ಬದಲಾಗಿದ್ದಾರೆ. ವಲಸೆ ಜನರಿಗೆ ಕೂಡಲೇ ಮನೆ ನೀಡಲು ಸಕಾರಣವೇನು? ನಮ್ಮ ವಿರುದ್ಧ ಮಾತನಾಡಲು ಕೇರಳ ಸರ್ಕಾರಕ್ಕೆ ಏನು ನೈತಿಕತೆ ಇದೆ? ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಈವರೆಗೂ ಮನೆ ನೀಡಿಲ್ಲ. ಅಲ್ಲಿನ ಜನರ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ನೋಡಿಲ್ಲ. ಕೇರಳದಲ್ಲಿ ಚುನಾವಣೆ ಇದೆ ಅಂತಾ ಈ ರೀತಿ ಮಾಡಬಾರದು ಎಂದು ವಾಗ್ದಾಳಿ ನಡೆಸಿದರು.
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…