ದೇಶ- ವಿದೇಶ

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. ಇದು ರಾಜ್ಯ ಸರ್ಕಾರ ದಡ್ಡತನದ ಪರಮಾವಧಿ. 2ನೇ ಅವಧಿಗೆ ಸಿಎಂ ಆದ ಬಳಿಕ ಸಿದ್ದರಾಮಯ್ಯ ಬಹಳ ಬದಲಾವಣೆಯಾಗಿದ್ದಾರೆ. ಮೊದಲಿನ ಸಿದ್ದರಾಮಯ್ಯ ಅಲ್ಲ. ಈಗ ಅವರು ತುಂಬಾ ಬದಲಾಗಿದ್ದಾರೆ. ವಲಸೆ ಜನರಿಗೆ ಕೂಡಲೇ ಮನೆ ನೀಡಲು ಸಕಾರಣವೇನು? ನಮ್ಮ ವಿರುದ್ಧ ಮಾತನಾಡಲು ಕೇರಳ ಸರ್ಕಾರಕ್ಕೆ ಏನು ನೈತಿಕತೆ ಇದೆ? ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಈವರೆಗೂ ಮನೆ ನೀಡಿಲ್ಲ. ಅಲ್ಲಿನ ಜನರ ಪರಿಸ್ಥಿತಿಯನ್ನು ಕಾಂಗ್ರೆಸ್‌ ಸರ್ಕಾರ ನೋಡಿಲ್ಲ. ಕೇರಳದಲ್ಲಿ ಚುನಾವಣೆ ಇದೆ ಅಂತಾ ಈ ರೀತಿ ಮಾಡಬಾರದು ಎಂದು ವಾಗ್ದಾಳಿ ನಡೆಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

1 hour ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

2 hours ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

2 hours ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…

2 hours ago

ವಿಬಿ-ಜೀ ರಾಮ್‌ ಜೀ ಹೆಸರಿನಲ್ಲಿ ರಾಜ್ಯ ಸರ್ಕಾರಗಳ ಮೇಲೆ ಹೊರೆ: ವಿ.ಶಿವದಾಸನ್‌

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌…

3 hours ago