ದೇಶ- ವಿದೇಶ

ಬೃಹತ್ ಶಸ್ತ್ರಾಸ್ತ್ರ ಕಳ್ಳ ಸಾಗಣೆ ಜಾಲ ಪತ್ತೆ

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದಿಲ್ಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ.

ರಾಷ್ಟ್ರ ರಾಜಧಾನಿ ದಿಲ್ಲಿಯ ಆನಂದ್ ವಿಹಾರ್‌ನಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ಬಳಿ ಇದ್ದ ಸುಮಾರು ೨ ಸಾವಿರ ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.

ಬಂಧಿತರ ವಶದಿಂದ ೨,೦೦೦ ಜೀವಂತ ಕಾಟ್ರಿಡ್ಜ್‌ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ದಿಲ್ಲಿ ಪೂರ್ವ ವಲಯ ಎಸಿಪಿ ವಿಕ್ರಮಜಿತ್ ಸಿಂಗ್ ಅವರು, ಈ ಮದ್ದುಗುಂಡುಗಳನ್ನು ಆರೋಪಿಗಳು ಉತ್ತರ ಪ್ರದೇಶದ ಲಖನೌಗೆ ಕಳ್ಳಸಾಗಣೆ ಮಾಡುತ್ತಿದ್ದರು. ಮೇಲ್ನೋಟಕ್ಕೆ ಇದು ಅಪರಾಧ ಜಾಲದ ಒಂದು ಭಾಗವಾಗಿ ಕಂಡುಬರುತ್ತದೆ. ಪ್ರಕರಣದಲ್ಲಿ ಭಯೋತ್ಪಾದನೆಯ ಕೋನವನ್ನು ತಳ್ಳಿಹಾಕಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ ೧೫ ರಂದು ಭಾರತ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸರು ಗಸ್ತು ಮತ್ತು ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಮೆಟ್ರೋ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಮಾರುಕಟ್ಟೆಗಳು ಸೇರಿದಂತೆ ದಿಲ್ಲಿಯ ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

andolana

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

6 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

6 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

6 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

6 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

6 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

6 hours ago