ದೇಶ- ವಿದೇಶ

ಬೃಹತ್ ಶಸ್ತ್ರಾಸ್ತ್ರ ಕಳ್ಳ ಸಾಗಣೆ ಜಾಲ ಪತ್ತೆ

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದಿಲ್ಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ.

ರಾಷ್ಟ್ರ ರಾಜಧಾನಿ ದಿಲ್ಲಿಯ ಆನಂದ್ ವಿಹಾರ್‌ನಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ಬಳಿ ಇದ್ದ ಸುಮಾರು ೨ ಸಾವಿರ ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.

ಬಂಧಿತರ ವಶದಿಂದ ೨,೦೦೦ ಜೀವಂತ ಕಾಟ್ರಿಡ್ಜ್‌ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ದಿಲ್ಲಿ ಪೂರ್ವ ವಲಯ ಎಸಿಪಿ ವಿಕ್ರಮಜಿತ್ ಸಿಂಗ್ ಅವರು, ಈ ಮದ್ದುಗುಂಡುಗಳನ್ನು ಆರೋಪಿಗಳು ಉತ್ತರ ಪ್ರದೇಶದ ಲಖನೌಗೆ ಕಳ್ಳಸಾಗಣೆ ಮಾಡುತ್ತಿದ್ದರು. ಮೇಲ್ನೋಟಕ್ಕೆ ಇದು ಅಪರಾಧ ಜಾಲದ ಒಂದು ಭಾಗವಾಗಿ ಕಂಡುಬರುತ್ತದೆ. ಪ್ರಕರಣದಲ್ಲಿ ಭಯೋತ್ಪಾದನೆಯ ಕೋನವನ್ನು ತಳ್ಳಿಹಾಕಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ ೧೫ ರಂದು ಭಾರತ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸರು ಗಸ್ತು ಮತ್ತು ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಮೆಟ್ರೋ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಮಾರುಕಟ್ಟೆಗಳು ಸೇರಿದಂತೆ ದಿಲ್ಲಿಯ ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

andolana

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

28 mins ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

3 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

3 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

3 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

6 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

9 hours ago