ದೇಶ- ವಿದೇಶ

ಬೃಹತ್ ಶಸ್ತ್ರಾಸ್ತ್ರ ಕಳ್ಳ ಸಾಗಣೆ ಜಾಲ ಪತ್ತೆ

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದಿಲ್ಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ.

ರಾಷ್ಟ್ರ ರಾಜಧಾನಿ ದಿಲ್ಲಿಯ ಆನಂದ್ ವಿಹಾರ್‌ನಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ಬಳಿ ಇದ್ದ ಸುಮಾರು ೨ ಸಾವಿರ ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.

ಬಂಧಿತರ ವಶದಿಂದ ೨,೦೦೦ ಜೀವಂತ ಕಾಟ್ರಿಡ್ಜ್‌ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ದಿಲ್ಲಿ ಪೂರ್ವ ವಲಯ ಎಸಿಪಿ ವಿಕ್ರಮಜಿತ್ ಸಿಂಗ್ ಅವರು, ಈ ಮದ್ದುಗುಂಡುಗಳನ್ನು ಆರೋಪಿಗಳು ಉತ್ತರ ಪ್ರದೇಶದ ಲಖನೌಗೆ ಕಳ್ಳಸಾಗಣೆ ಮಾಡುತ್ತಿದ್ದರು. ಮೇಲ್ನೋಟಕ್ಕೆ ಇದು ಅಪರಾಧ ಜಾಲದ ಒಂದು ಭಾಗವಾಗಿ ಕಂಡುಬರುತ್ತದೆ. ಪ್ರಕರಣದಲ್ಲಿ ಭಯೋತ್ಪಾದನೆಯ ಕೋನವನ್ನು ತಳ್ಳಿಹಾಕಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ ೧೫ ರಂದು ಭಾರತ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸರು ಗಸ್ತು ಮತ್ತು ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಮೆಟ್ರೋ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಮಾರುಕಟ್ಟೆಗಳು ಸೇರಿದಂತೆ ದಿಲ್ಲಿಯ ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

7 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

8 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

8 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

8 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

9 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

17 hours ago