tirupati
ಅಮರಾವತಿ: ತಿರುಪತಿ ತಿಮ್ಮಪ್ಪನ ಹುಂಡಿಗೆ ಕೋಟಿ ಕೋಟಿ ಹಣ ಬೀಳುತ್ತಿದೆ. ಕಳೆದ ತಿಂಗಳು ಹುಂಡಿಗೆ ಭಕ್ತರು ಬರೊಬ್ಬರಿ 129 ಕೋಟಿ ರೂ.ಗಳ ಕಾಣಿಕೆ ಸಲ್ಲಿಸಿದ್ದಾರೆ.
ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ.
2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ಸಲಕ್ಕಿಂತ 4.09 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಮೂಲಗಳು ತಿಳಿಸಿವೆ.
ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ತೆರೆದಿದ್ದರೂ ಕೂಡ ಜುಲೈನಲ್ಲಿ ಭಕ್ತರ ಬರುವಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. ಈ ವರ್ಷ ಇಲ್ಲಿಯವರೆಗೆ 23.76 ಲಕ್ಷ ಭಕ್ತರು ತಿರುಪತಿಗೆ ಆಗಮಿಸಿ, ದರ್ಶನ ಪಡೆದುಕೊಂಡಿದ್ದಾರೆ.
ಟಿಟಿಡಿ ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ವರ್ಷಕ್ಕಿಂತ ಈ ವರ್ಷ ಭಕ್ತರ ಸಂಖ್ಯೆಯಲ್ಲಿ ಶೇ.7.4ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…