tirupati
ಅಮರಾವತಿ: ತಿರುಪತಿ ತಿಮ್ಮಪ್ಪನ ಹುಂಡಿಗೆ ಕೋಟಿ ಕೋಟಿ ಹಣ ಬೀಳುತ್ತಿದೆ. ಕಳೆದ ತಿಂಗಳು ಹುಂಡಿಗೆ ಭಕ್ತರು ಬರೊಬ್ಬರಿ 129 ಕೋಟಿ ರೂ.ಗಳ ಕಾಣಿಕೆ ಸಲ್ಲಿಸಿದ್ದಾರೆ.
ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ.
2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ಸಲಕ್ಕಿಂತ 4.09 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಮೂಲಗಳು ತಿಳಿಸಿವೆ.
ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ತೆರೆದಿದ್ದರೂ ಕೂಡ ಜುಲೈನಲ್ಲಿ ಭಕ್ತರ ಬರುವಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. ಈ ವರ್ಷ ಇಲ್ಲಿಯವರೆಗೆ 23.76 ಲಕ್ಷ ಭಕ್ತರು ತಿರುಪತಿಗೆ ಆಗಮಿಸಿ, ದರ್ಶನ ಪಡೆದುಕೊಂಡಿದ್ದಾರೆ.
ಟಿಟಿಡಿ ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ವರ್ಷಕ್ಕಿಂತ ಈ ವರ್ಷ ಭಕ್ತರ ಸಂಖ್ಯೆಯಲ್ಲಿ ಶೇ.7.4ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…