ವಾಷಿಂಗ್ಟನ್: ಮಧ್ಯ ಅಮೇರಿಕಾದಲ್ಲಿನ ಭೀಕರ ಚಂಡಮಾರುತಕ್ಕೆ ಕನಿಷ್ಠ 33 ಮಂದಿ ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೀಕರ ಸುಂಟರಗಾಳಿಗೆ ಮನೆ ಛಾವಣಿಗಳು ಹರಿದು ಹೋಗಿದ್ದು, ಬೃಹತ್ ಟ್ರಕ್ಗಳು ಉರುಳಿ ಬಿದ್ದಿವೆ ಎಂದು ವರದಿಯಾಗಿದೆ.
ಭಾರಿ ಗಾಳಿಯಿಂದ ಎದ್ದ ಧೂಳಿನಿಂದ ಕಾನ್ಸಾಸ್ನಲ್ಲಿ 50ಕ್ಕೂ ಹೆಚ್ಚು ವಾಹನಗಳು ಸಂಪರ್ಕ ಕಡಿತಗೊಂಡು ಸರಣಿ ಅಪಘಾತ ಸಂಭವಿಸಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂಡಮಾರುತದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಿಸೌರಿ ರಾಜ್ಯದ ಹೆದ್ದಾರಿ ಗಸ್ತು ಪೊಲೀಸರು ದೃಢಪಡಿಸಿದ್ದಾರೆ. ಮರಗಳು ಮತ್ತು ವಿದ್ಯುತ್ ತಂತಿಗಳು ಉರುಳಿ ಬಿದ್ದಿದೆ. ಗಾಳಿಯ ರಭಸಕ್ಕೆ ಮರೀನಾ ಬಂದರಲ್ಲಿ ಒಂದೆಡೆ ರಾಶಿ ಬಿದ್ದಿರುವ ದೋಣಿಗಳ ಚಿತ್ರವನ್ನು ಅಧಿಕಾರಿಗಳು ಹಂಚಿಕೊಂಡಿದ್ದಾರೆ.
ಇದು ನಾನು ಅನುಭವಿಸಿದ ಅತ್ಯಂತ ಭಯಾನಕ ವಿಷಯ. ಚಂಡಮಾರತುದ ವೇಗ ಅತ್ಯಂತ ಭೀಕರವಾಗಿತ್ತು. ಅದರ ವೇಗಕ್ಕೆ ನಮ್ಮ ಕಿವಿಗಳು ಸಿಡಿಯುತ್ತಿದ್ದವು ಎಂದು ಮಿಸೌರಿಯ ನಿವಾಸಿ ಅಲಿಸಿಯಾ ವಿಲ್ಸನ್ ಚಂಡಮಾರುತದ ಭೀಕರತೆಯನ್ನು ತೆರೆದಿಟ್ಟರು.
ಮಿಸೌರಿಯ ವೇಯ್ನ್ ಕೌಂಟ್ನಲ್ಲಿ 6, ಒಝಾರ್ಕ್ ಕೌಂಟಿಯಲ್ಲಿ 3 ಹಾಗೂ ಲೂಯಿಸ್ ಕೌಂಟಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟೆಕ್ಸಾಸ್ನ ದಕ್ಷಿಣ ಭಾಗದಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್ ಭಾಗದಲ್ಲಿ ಮೂವರು ಮೃತಪಟ್ಟು 29 ಮಂದಿ ಗಾಯಗೊಂಡಿದ್ದಾರೆ. ಮಧ್ಯ ಅಮೇರಿಕಾದ ಕನಿಷ್ಠ 2 ಲಕ್ಷ ಮನೆ ಹಾಗೂ ಕಚೇರಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…