ವಾಷಿಂಗ್ಟನ್: ಮಧ್ಯ ಅಮೇರಿಕಾದಲ್ಲಿನ ಭೀಕರ ಚಂಡಮಾರುತಕ್ಕೆ ಕನಿಷ್ಠ 33 ಮಂದಿ ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೀಕರ ಸುಂಟರಗಾಳಿಗೆ ಮನೆ ಛಾವಣಿಗಳು ಹರಿದು ಹೋಗಿದ್ದು, ಬೃಹತ್ ಟ್ರಕ್ಗಳು ಉರುಳಿ ಬಿದ್ದಿವೆ ಎಂದು ವರದಿಯಾಗಿದೆ.
ಭಾರಿ ಗಾಳಿಯಿಂದ ಎದ್ದ ಧೂಳಿನಿಂದ ಕಾನ್ಸಾಸ್ನಲ್ಲಿ 50ಕ್ಕೂ ಹೆಚ್ಚು ವಾಹನಗಳು ಸಂಪರ್ಕ ಕಡಿತಗೊಂಡು ಸರಣಿ ಅಪಘಾತ ಸಂಭವಿಸಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಂಡಮಾರುತದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಿಸೌರಿ ರಾಜ್ಯದ ಹೆದ್ದಾರಿ ಗಸ್ತು ಪೊಲೀಸರು ದೃಢಪಡಿಸಿದ್ದಾರೆ. ಮರಗಳು ಮತ್ತು ವಿದ್ಯುತ್ ತಂತಿಗಳು ಉರುಳಿ ಬಿದ್ದಿದೆ. ಗಾಳಿಯ ರಭಸಕ್ಕೆ ಮರೀನಾ ಬಂದರಲ್ಲಿ ಒಂದೆಡೆ ರಾಶಿ ಬಿದ್ದಿರುವ ದೋಣಿಗಳ ಚಿತ್ರವನ್ನು ಅಧಿಕಾರಿಗಳು ಹಂಚಿಕೊಂಡಿದ್ದಾರೆ.
ಇದು ನಾನು ಅನುಭವಿಸಿದ ಅತ್ಯಂತ ಭಯಾನಕ ವಿಷಯ. ಚಂಡಮಾರತುದ ವೇಗ ಅತ್ಯಂತ ಭೀಕರವಾಗಿತ್ತು. ಅದರ ವೇಗಕ್ಕೆ ನಮ್ಮ ಕಿವಿಗಳು ಸಿಡಿಯುತ್ತಿದ್ದವು ಎಂದು ಮಿಸೌರಿಯ ನಿವಾಸಿ ಅಲಿಸಿಯಾ ವಿಲ್ಸನ್ ಚಂಡಮಾರುತದ ಭೀಕರತೆಯನ್ನು ತೆರೆದಿಟ್ಟರು.
ಮಿಸೌರಿಯ ವೇಯ್ನ್ ಕೌಂಟ್ನಲ್ಲಿ 6, ಒಝಾರ್ಕ್ ಕೌಂಟಿಯಲ್ಲಿ 3 ಹಾಗೂ ಲೂಯಿಸ್ ಕೌಂಟಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟೆಕ್ಸಾಸ್ನ ದಕ್ಷಿಣ ಭಾಗದಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್ ಭಾಗದಲ್ಲಿ ಮೂವರು ಮೃತಪಟ್ಟು 29 ಮಂದಿ ಗಾಯಗೊಂಡಿದ್ದಾರೆ. ಮಧ್ಯ ಅಮೇರಿಕಾದ ಕನಿಷ್ಠ 2 ಲಕ್ಷ ಮನೆ ಹಾಗೂ ಕಚೇರಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…