ದೇಶ- ವಿದೇಶ

ಮಧ್ಯ ಅಮೇರಿಕಾದಲ್ಲಿ ಚಂಡಮಾರುತ: ಕನಿಷ್ಠ 33 ಸಾವು

ವಾಷಿಂಗ್ಟನ್‌: ಮಧ್ಯ ಅಮೇರಿಕಾದಲ್ಲಿನ ಭೀಕರ ಚಂಡಮಾರುತಕ್ಕೆ ಕನಿಷ್ಠ 33 ಮಂದಿ ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೀಕರ ಸುಂಟರಗಾಳಿಗೆ ಮನೆ ಛಾವಣಿಗಳು ಹರಿದು ಹೋಗಿದ್ದು, ಬೃಹತ್‌ ಟ್ರಕ್‌ಗಳು ಉರುಳಿ ಬಿದ್ದಿವೆ ಎಂದು ವರದಿಯಾಗಿದೆ.

ಭಾರಿ ಗಾಳಿಯಿಂದ ಎದ್ದ ಧೂಳಿನಿಂದ ಕಾನ್ಸಾಸ್‌ನಲ್ಲಿ 50ಕ್ಕೂ ಹೆಚ್ಚು ವಾಹನಗಳು ಸಂಪರ್ಕ ಕಡಿತಗೊಂಡು ಸರಣಿ ಅಪಘಾತ ಸಂಭವಿಸಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂಡಮಾರುತದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಿಸೌರಿ ರಾಜ್ಯದ ಹೆದ್ದಾರಿ ಗಸ್ತು ಪೊಲೀಸರು ದೃಢಪಡಿಸಿದ್ದಾರೆ. ಮರಗಳು ಮತ್ತು ವಿದ್ಯುತ್‌ ತಂತಿಗಳು ಉರುಳಿ ಬಿದ್ದಿದೆ. ಗಾಳಿಯ ರಭಸಕ್ಕೆ ಮರೀನಾ ಬಂದರಲ್ಲಿ ಒಂದೆಡೆ ರಾಶಿ ಬಿದ್ದಿರುವ ದೋಣಿಗಳ ಚಿತ್ರವನ್ನು ಅಧಿಕಾರಿಗಳು ಹಂಚಿಕೊಂಡಿದ್ದಾರೆ.

ಇದು ನಾನು ಅನುಭವಿಸಿದ ಅತ್ಯಂತ ಭಯಾನಕ ವಿಷಯ. ಚಂಡಮಾರತುದ ವೇಗ ಅತ್ಯಂತ ಭೀಕರವಾಗಿತ್ತು. ಅದರ ವೇಗಕ್ಕೆ ನಮ್ಮ ಕಿವಿಗಳು ಸಿಡಿಯುತ್ತಿದ್ದವು ಎಂದು ಮಿಸೌರಿಯ ನಿವಾಸಿ ಅಲಿಸಿಯಾ ವಿಲ್ಸನ್‌ ಚಂಡಮಾರುತದ ಭೀಕರತೆಯನ್ನು ತೆರೆದಿಟ್ಟರು.

ಮಿಸೌರಿಯ ವೇಯ್ನ್‌ ಕೌಂಟ್‌ನಲ್ಲಿ 6, ಒಝಾರ್ಕ್‌ ಕೌಂಟಿಯಲ್ಲಿ 3 ಹಾಗೂ ಲೂಯಿಸ್‌ ಕೌಂಟಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟೆಕ್ಸಾಸ್‌ನ ದಕ್ಷಿಣ ಭಾಗದಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್‌ ಭಾಗದಲ್ಲಿ ಮೂವರು ಮೃತಪಟ್ಟು 29 ಮಂದಿ ಗಾಯಗೊಂಡಿದ್ದಾರೆ. ಮಧ್ಯ ಅಮೇರಿಕಾದ ಕನಿಷ್ಠ 2 ಲಕ್ಷ ಮನೆ ಹಾಗೂ ಕಚೇರಿಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

2 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

3 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

3 hours ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

17 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

18 hours ago