ಉತ್ತರ ಪ್ರದೇಶ: ಗಂಡ ತನಗೆ ಕುರ್ಕುರೆ ತರಲಿಲ್ಲ ಎಂದು ಮುನಿಸಕೊಂಡ ಹೆಂಡತಿ ಗಂಡನ ವಿರುದ್ಧ ಪೊಲೀಸ್ ಠಾಣಾ ಮೆಟ್ಟಿಲೇರಿದ್ದು, ಈ ಪ್ರಕರಣ ಡಿವೋರ್ಸ್ ಹಂತಕ್ಕೆ ತಲುಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಆಜ್ ತಕ್ ನೀಡಿರುವ ವರದಿಯ ಪ್ರಕಾರ, ಮಹಿಳೆಯೂ ಕಳೆದ ಒಂದೂರವರೆ ತಿಂಗಳಿನಿಂದ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಾರೆ. ಗಂಡ ತನ್ನನ್ನು ನೋಡಲು ಬಂದ ವೇಳೆ ಮಹಿಳೆ ಗಂಡನ ಮೇಲೆ ದೂರು ನೀಡಲು ಠಾಣೆ ಬಂದಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇಲೆ ವಿಚಾರಣೆ ನಡೆಸಿದಾಗ ಇವರಿಬ್ಬರ ನಡುವೆ 5ರೂ ಕುರ್ಕುರೆಗೆ ಜಗಳ ಬಂದಿದೆ ಎಂಬುದು ಗೊತ್ತಾಗಿದೆ.
ಈ ಇಬ್ಬರಿಗೂ ಕೌನ್ಸಿಲಿಂಗ್ ಮಾಡಿದ ಡಾ. ಸತೀಶ್ ಅವರು ಹೇಳುವಂತೆ ಕಳೆದ ವರ್ಷ ಈ ಇಬ್ಬರಿಗೂ ಮದುವೆಯಾಗಿತ್ತು. ಮದುವೆಯಾದಾಗಿನಿಂದ ಪತಿ ನನಗೆ ಒಡೆಯುತ್ತಾನೆ ಎಂದು ಮಹಿಳೆ ದೂರು ನೀಡಿದರೇ, ಗಂಡ ಕೇವಲ ಐದು ರೂಪಾಯಿಯ ಕುರ್ಕುರೆಗೆ ಜಗಳ ಆಡುತ್ತಾಳೆ. ಕುರ್ಕುರೆಗಾಗಿ ತಾಯಿಯ ಮೆನೆಗೆ ಹೋಗಿದ್ದಾಳೆ ಎಂದು ಗಂಡ ಮಾಹಿತಿ ನೀಡಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿಂತೆ ಇಬ್ಬರು ರಾಜೀಯಾಗುವ ಸಾಧ್ಯತೆಯಿದ್ದು, ಮುಂದಿನ ದಿನಾಂಕ ನಿಗದಿವರೆಗೆ ಪ್ರಕರಣವನ್ನು ಮುಂದೂಡಲಾಗಿದೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…