ಉತ್ತರ ಪ್ರದೇಶ: ಗಂಡ ತನಗೆ ಕುರ್ಕುರೆ ತರಲಿಲ್ಲ ಎಂದು ಮುನಿಸಕೊಂಡ ಹೆಂಡತಿ ಗಂಡನ ವಿರುದ್ಧ ಪೊಲೀಸ್ ಠಾಣಾ ಮೆಟ್ಟಿಲೇರಿದ್ದು, ಈ ಪ್ರಕರಣ ಡಿವೋರ್ಸ್ ಹಂತಕ್ಕೆ ತಲುಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಆಜ್ ತಕ್ ನೀಡಿರುವ ವರದಿಯ ಪ್ರಕಾರ, ಮಹಿಳೆಯೂ ಕಳೆದ ಒಂದೂರವರೆ ತಿಂಗಳಿನಿಂದ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಾರೆ. ಗಂಡ ತನ್ನನ್ನು ನೋಡಲು ಬಂದ ವೇಳೆ ಮಹಿಳೆ ಗಂಡನ ಮೇಲೆ ದೂರು ನೀಡಲು ಠಾಣೆ ಬಂದಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇಲೆ ವಿಚಾರಣೆ ನಡೆಸಿದಾಗ ಇವರಿಬ್ಬರ ನಡುವೆ 5ರೂ ಕುರ್ಕುರೆಗೆ ಜಗಳ ಬಂದಿದೆ ಎಂಬುದು ಗೊತ್ತಾಗಿದೆ.
ಈ ಇಬ್ಬರಿಗೂ ಕೌನ್ಸಿಲಿಂಗ್ ಮಾಡಿದ ಡಾ. ಸತೀಶ್ ಅವರು ಹೇಳುವಂತೆ ಕಳೆದ ವರ್ಷ ಈ ಇಬ್ಬರಿಗೂ ಮದುವೆಯಾಗಿತ್ತು. ಮದುವೆಯಾದಾಗಿನಿಂದ ಪತಿ ನನಗೆ ಒಡೆಯುತ್ತಾನೆ ಎಂದು ಮಹಿಳೆ ದೂರು ನೀಡಿದರೇ, ಗಂಡ ಕೇವಲ ಐದು ರೂಪಾಯಿಯ ಕುರ್ಕುರೆಗೆ ಜಗಳ ಆಡುತ್ತಾಳೆ. ಕುರ್ಕುರೆಗಾಗಿ ತಾಯಿಯ ಮೆನೆಗೆ ಹೋಗಿದ್ದಾಳೆ ಎಂದು ಗಂಡ ಮಾಹಿತಿ ನೀಡಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿಂತೆ ಇಬ್ಬರು ರಾಜೀಯಾಗುವ ಸಾಧ್ಯತೆಯಿದ್ದು, ಮುಂದಿನ ದಿನಾಂಕ ನಿಗದಿವರೆಗೆ ಪ್ರಕರಣವನ್ನು ಮುಂದೂಡಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…