ದೇಶ- ವಿದೇಶ

ಪತ್ನಿ ಅಸ್ತಿ ವಿಸರ್ಜನೆಗೆ ಬಂದಿದ್ದ ಪತಿ ಸಾವು ; ಇದು ವಿಮಾನ ದುರಂತದ ಕರುಣಾಜನಕ ಕಥೆ

ಅಹಮದಾಬಾದ್‌ : ಏರ್‌ ಇಂಡಿಯಾ ವಿಮಾನ ಪತನಗೊಂಡು 241 ಜನರು ಅಸುನೀಗಿದ್ದಾರೆ. ಈ ದಾರುಣ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಹೃದಯ ವಿದ್ರಾವಕ ಕಥೆಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ಕಥೆಗಳು ಎಲ್ಲರ ಮನ ಕುಲುಕುತ್ತಿವೆ.

ಮೃತ ಹೆಂಡತಿಯ ಅಸ್ತಿಯನ್ನು ಆಕೆಯ ಇಚ್ಛೆಯಂತೆಯೇ ನರ್ಮದಾ ನದಿಯಲ್ಲಿ ವಿಸರ್ಜಿಸಲು ಬಂದಿದ್ದ ಅರ್ಜುನ್‌ ಪಟೋಲಿಯಾ ಅವರು ವಿಮಾನ ದುರಂತದಲ್ಲಿ ಸುಟ್ಟು ಬುದಿಯಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ದಂಪತಿ ನಾಲ್ಕು ಮತ್ತು ಎಂಟು ವರ್ಷದ ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.

ಅನಾರೋಗ್ಯದ ಕಾರಣ ಎರಡು ವಾರಗಳ ಹಿಂದಷ್ಟೇ ಅರ್ಜುನ್‌ ಅವರ ಪತ್ನಿ ಭಾರತಿ ಅವರು ಲಂಡನ್‌ನಲ್ಲಿ ಮೃತಪಟ್ಟಿದ್ದರು. ಮೃತ ಅರ್ಜುನ್‌ ದಂಪತಿ ಹಲವು ವರ್ಷಗಳಿಂದ ಲಂಡನ್‌ನಲ್ಲಿ ವಾಸವಿದ್ದರು. ಸದ್ಯ ಮೃತ ದಂಪತಿಯ ಇಬ್ಬರು ಮಕ್ಕಳು ಹತ್ತಿರದ ಸಂಬಂಧಿಕರ ಮನೆಯಲ್ಲಿದ್ದಾರೆ ಎಂದು ಅರ್ಜುನ್‌ ಅವರ ಸಹೋದರ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

28 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

2 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

4 hours ago