ದೇಶ- ವಿದೇಶ

ವರದಕ್ಷಿಣೆ ದೌರ್ಜನ್ಯ | ಮಗನ ಕಣ್ಣೆದುರೆ ಪತ್ನಿಯನ್ನ ಬೆಂಕಿ ಹಚ್ಚಿ ಕೊಂದ ಪತಿ

ಹೊಸದಿಲ್ಲಿ : ವರದಕ್ಷಿಣೆ ಹಣಕ್ಕಾಗಿ ಕುಟುಂಬವೊಂದು ಮಹಿಳೆಯನ್ನು ಆಕೆಯ ಸಹೋದರಿ ಮತ್ತು ಮಗನ ಕಣ್ಣೆದುರಿನಲ್ಲೇ ಹಲ್ಲೆ ಮಾಡಿ, ಕೂದಲು ಹಿಡಿದು ಎಳೆದಾಡಿ ಬೆಂಕಿ ಹಚ್ಚಿ ಕೊಂದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.

ಪತಿಯಿಂದ ಬೆಂಕಿ ಹಚ್ಚಲ್ಪಟ್ಟ ಮಹಿಳೆಯ ಆರು ವರ್ಷದ ಮಗ, ತನ್ನ ತಂದೆ ತನ್ನ ತಾಯಿಯನ್ನು ತನ್ನ ಮುಂದೆಯೇ ಕೊಂದಿದ್ದಾನೆ ಎಂದು ಬಹಿರಂಗಪಡಿಸಿದ್ದು, ಆಕೆಯ ಸಾವಿಗೆ ಕಾರಣವಾದ ದೌರ್ಜನ್ಯವನ್ನು ವಿವರಿಸಿದ್ದಾನೆ.

ಆ ಭಯಾನಕ ಘಟನೆಯನ್ನು ವಿವರಿಸಿರುವ ಬಾಲಕ ತನ್ನ ತಂದೆ ಮತ್ತು ಅಜ್ಜಿ ತನ್ನ ತಾಯಿಯ ಮೇಲೆ ಒಂದು ವಸ್ತುವನ್ನು ಸುರಿದು, ಕಪಾಳಮೋಕ್ಷ ಮಾಡಿ, ನಂತರ ಬೆಂಕಿ ಹಚ್ಚಿದರು ಎಂದು ಹೇಳಿಕೊಂಡಿದ್ದಾನೆ.

ʻಮೇರಿ ಮಮ್ಮಾ ಕೆ ಉಪರ್ ಕುಚ್ ದಲಾ, ಫಿರ್ ಉಂಕೋ ಚಾಂತ ಮಾರಾ ಫಿರ್ ಲೈಟರ್ ಸೆ ಆಗ್ ಲಗಾ ದಿ. (ಅವರು ನನ್ನ ತಾಯಿಯ ಮೇಲೆ ಏನೋ ಸುರಿದು, ಅವರಿಗೆ ಕಪಾಳಮೋಕ್ಷ ಮಾಡಿ, ಲೈಟರ್ ಬಳಸಿ ಬೆಂಕಿ ಹಚ್ಚಿದರು)ʼ ಎಂಬುದನ್ನು ಬಹಿರಂಗಪಡಿಸಿದ್ದಾನೆ.

ಮಾಧ್ಯಮದ ಯಾರೋ ಒಬ್ಬರು ತನ್ನ ತಂದೆ ಅವಳನ್ನು ಕೊಲೆ ಮಾಡಿದ್ದಾರಾ ಎಂದು ಕೇಳಿದಾಗ ಪರೋಕ್ಷವಾಗಿ ಒಪ್ಪಿಕೊಂಡಿದ್ದಾನೆ. ಈ ಭಯಾನಕ ಘಟನೆಯ ಎರಡು ವೀಡಿಯೊಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ಒಂದು ವೀಡಿಯೊದಲ್ಲಿ, ಪುರುಷ ಮತ್ತು ಮಹಿಳೆಯೊಬ್ಬರು ಮಹಿಳೆಯ ಮೇಲೆ ಹಲ್ಲೆ ಮಾಡಿ ಆಕೆಯ ಕೂದಲನ್ನು ಹಿಡಿದು ಮನೆಯಿಂದ ಹೊರಗೆ ಹೋಗುವುದನ್ನು ಕಾಣಬಹುದು. ಇನ್ನೊಂದು ವೀಡಿಯೊದಲ್ಲಿ ಮಹಿಳೆ ಬೆಂಕಿ ಹಚ್ಚಿದ ನಂತರ ಮೆಟ್ಟಿಲುಗಳ ಕೆಳಗೆ ಕುಂಟುತ್ತಾ ಇಳಿಯುವುದನ್ನು ಸೆರೆಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿರ್ಸಾ ಗ್ರಾಮದಲ್ಲಿ ನಡೆದ ಘಟನೆಯ ವಿಡಿಯೋವನ್ನು ನಿಕ್ಕಿ ಎಂದು ಗುರುತಿಸಲಾದ ಮಹಿಳೆಯ ಅಕ್ಕ ಕಾಂಚನ್ ಸೆರೆಹಿಡಿದಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿದ ಕಾಂಚನ್, ೩೬ ಲಕ್ಷ ರೂ. ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ತನ್ನ ತಂಗಿಯನ್ನು ಪತಿ ವಿಪಿನ್ ಮತ್ತು ಅತ್ತೆ ಮಾವಂದಿರು ಕೊಂದಿದ್ದಾರೆ. ಗುರುವಾರ ರಾತ್ರಿ, ಆಕೆಯನ್ನು ತೀವ್ರವಾಗಿ ಥಳಿಸಿ ಬೆಂಕಿ ಹಚ್ಚಲಾಗಿದೆ ಎಂದು ವಿಪಿನ್ ಸಹೋದರನನ್ನು ಮದುವೆಯಾಗಿರುವ ಕಾಂಚನ್ ಆರೋಪಿಸಿದ್ದಾರೆ.

ಮದುವೆಯ ನಂತರ, ಅವರು ೩೫ ಲಕ್ಷ ರೂ. ಬೇಡಿಕೆ ಇಟ್ಟರು. ನಾವು ಅವರಿಗೆ ಮತ್ತೊಂದು ಕಾರನ್ನು ಸಹ ನೀಡಿದ್ದೇವೆ, ಆದರೆ ಅವರ ಬೇಡಿಕೆಗಳು ಮತ್ತು ಕಿರುಕುಳ ನಿರಂತರವಾಗಿ ಮುಂದುವರಿದಿತ್ತು ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

18 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

22 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

1 hour ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

1 hour ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

2 hours ago