ದೇಶ- ವಿದೇಶ

ವರದಕ್ಷಿಣೆ ದೌರ್ಜನ್ಯ | ಮಗನ ಕಣ್ಣೆದುರೆ ಪತ್ನಿಯನ್ನ ಬೆಂಕಿ ಹಚ್ಚಿ ಕೊಂದ ಪತಿ

ಹೊಸದಿಲ್ಲಿ : ವರದಕ್ಷಿಣೆ ಹಣಕ್ಕಾಗಿ ಕುಟುಂಬವೊಂದು ಮಹಿಳೆಯನ್ನು ಆಕೆಯ ಸಹೋದರಿ ಮತ್ತು ಮಗನ ಕಣ್ಣೆದುರಿನಲ್ಲೇ ಹಲ್ಲೆ ಮಾಡಿ, ಕೂದಲು ಹಿಡಿದು ಎಳೆದಾಡಿ ಬೆಂಕಿ ಹಚ್ಚಿ ಕೊಂದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.

ಪತಿಯಿಂದ ಬೆಂಕಿ ಹಚ್ಚಲ್ಪಟ್ಟ ಮಹಿಳೆಯ ಆರು ವರ್ಷದ ಮಗ, ತನ್ನ ತಂದೆ ತನ್ನ ತಾಯಿಯನ್ನು ತನ್ನ ಮುಂದೆಯೇ ಕೊಂದಿದ್ದಾನೆ ಎಂದು ಬಹಿರಂಗಪಡಿಸಿದ್ದು, ಆಕೆಯ ಸಾವಿಗೆ ಕಾರಣವಾದ ದೌರ್ಜನ್ಯವನ್ನು ವಿವರಿಸಿದ್ದಾನೆ.

ಆ ಭಯಾನಕ ಘಟನೆಯನ್ನು ವಿವರಿಸಿರುವ ಬಾಲಕ ತನ್ನ ತಂದೆ ಮತ್ತು ಅಜ್ಜಿ ತನ್ನ ತಾಯಿಯ ಮೇಲೆ ಒಂದು ವಸ್ತುವನ್ನು ಸುರಿದು, ಕಪಾಳಮೋಕ್ಷ ಮಾಡಿ, ನಂತರ ಬೆಂಕಿ ಹಚ್ಚಿದರು ಎಂದು ಹೇಳಿಕೊಂಡಿದ್ದಾನೆ.

ʻಮೇರಿ ಮಮ್ಮಾ ಕೆ ಉಪರ್ ಕುಚ್ ದಲಾ, ಫಿರ್ ಉಂಕೋ ಚಾಂತ ಮಾರಾ ಫಿರ್ ಲೈಟರ್ ಸೆ ಆಗ್ ಲಗಾ ದಿ. (ಅವರು ನನ್ನ ತಾಯಿಯ ಮೇಲೆ ಏನೋ ಸುರಿದು, ಅವರಿಗೆ ಕಪಾಳಮೋಕ್ಷ ಮಾಡಿ, ಲೈಟರ್ ಬಳಸಿ ಬೆಂಕಿ ಹಚ್ಚಿದರು)ʼ ಎಂಬುದನ್ನು ಬಹಿರಂಗಪಡಿಸಿದ್ದಾನೆ.

ಮಾಧ್ಯಮದ ಯಾರೋ ಒಬ್ಬರು ತನ್ನ ತಂದೆ ಅವಳನ್ನು ಕೊಲೆ ಮಾಡಿದ್ದಾರಾ ಎಂದು ಕೇಳಿದಾಗ ಪರೋಕ್ಷವಾಗಿ ಒಪ್ಪಿಕೊಂಡಿದ್ದಾನೆ. ಈ ಭಯಾನಕ ಘಟನೆಯ ಎರಡು ವೀಡಿಯೊಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ಒಂದು ವೀಡಿಯೊದಲ್ಲಿ, ಪುರುಷ ಮತ್ತು ಮಹಿಳೆಯೊಬ್ಬರು ಮಹಿಳೆಯ ಮೇಲೆ ಹಲ್ಲೆ ಮಾಡಿ ಆಕೆಯ ಕೂದಲನ್ನು ಹಿಡಿದು ಮನೆಯಿಂದ ಹೊರಗೆ ಹೋಗುವುದನ್ನು ಕಾಣಬಹುದು. ಇನ್ನೊಂದು ವೀಡಿಯೊದಲ್ಲಿ ಮಹಿಳೆ ಬೆಂಕಿ ಹಚ್ಚಿದ ನಂತರ ಮೆಟ್ಟಿಲುಗಳ ಕೆಳಗೆ ಕುಂಟುತ್ತಾ ಇಳಿಯುವುದನ್ನು ಸೆರೆಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿರ್ಸಾ ಗ್ರಾಮದಲ್ಲಿ ನಡೆದ ಘಟನೆಯ ವಿಡಿಯೋವನ್ನು ನಿಕ್ಕಿ ಎಂದು ಗುರುತಿಸಲಾದ ಮಹಿಳೆಯ ಅಕ್ಕ ಕಾಂಚನ್ ಸೆರೆಹಿಡಿದಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿದ ಕಾಂಚನ್, ೩೬ ಲಕ್ಷ ರೂ. ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ತನ್ನ ತಂಗಿಯನ್ನು ಪತಿ ವಿಪಿನ್ ಮತ್ತು ಅತ್ತೆ ಮಾವಂದಿರು ಕೊಂದಿದ್ದಾರೆ. ಗುರುವಾರ ರಾತ್ರಿ, ಆಕೆಯನ್ನು ತೀವ್ರವಾಗಿ ಥಳಿಸಿ ಬೆಂಕಿ ಹಚ್ಚಲಾಗಿದೆ ಎಂದು ವಿಪಿನ್ ಸಹೋದರನನ್ನು ಮದುವೆಯಾಗಿರುವ ಕಾಂಚನ್ ಆರೋಪಿಸಿದ್ದಾರೆ.

ಮದುವೆಯ ನಂತರ, ಅವರು ೩೫ ಲಕ್ಷ ರೂ. ಬೇಡಿಕೆ ಇಟ್ಟರು. ನಾವು ಅವರಿಗೆ ಮತ್ತೊಂದು ಕಾರನ್ನು ಸಹ ನೀಡಿದ್ದೇವೆ, ಆದರೆ ಅವರ ಬೇಡಿಕೆಗಳು ಮತ್ತು ಕಿರುಕುಳ ನಿರಂತರವಾಗಿ ಮುಂದುವರಿದಿತ್ತು ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

24 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago