ದೇಶ- ವಿದೇಶ

ಅಗ್ನಿ ಅವಘಡ : 17 ಮಂದಿ ಸಜೀವ ದಹನ

ಹೈದರಾಬಾದ್‌ : ಐತಿಹಾಸಿಕ ಚಾರ್ಮಿನಾರ್‌ ಬಳಿಯ ಗುಲ್ಜಾರ್‌ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ.

ಘಟನೆ ಬಗ್ಗೆ ಸಿಎಂ ರೇವಂತ್‌ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಳಿಗ್ಗೆ 6;30ರ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಬಂದಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಹಲವರು ಪ್ರಜ್ಞಾಹೀನರಾಗಿ ಪತ್ತೆಯಾಗಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಮೃತರಲ್ಲಿ ಆರು ಮಕ್ಕಳು ಸೇರಿದಂತೆ 17 ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಅಗ್ನಿ ದುರಂತದ ಬಗ್ಗೆ ಆಂಧ್ರಪ್ರದೇಶದ ಸಚಿವರು ಸೇರಿದಂತೆ ಕೇಂದ್ರ ನಾಯಕರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿಯು ಸಂತಾಪ ಸೂಚಿಸಿದ್ದು, ಮೃತ ಸಂಬಂಧಿಕರಿಗೆ ಪಿಎಂ ನಿಧಿಯಿಂದ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ .ರೂ ಪರಿಹಾರ ಘೋಷಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

9 mins ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

19 mins ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

56 mins ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

2 hours ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

4 hours ago